Saturday, May 16, 2026
Saturday, May 16, 2026

Forest Department ಕಿರುಗುಣಸೆ ಗ್ರಾಮದಲ್ಲಿ ಬೇಲಿ ಉರುಳಿಗೆ ಚಿರತೆ ಬಲಿ

Date:

Forest Department ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ನಡೆದಿದೆ.

ಗ್ರಾಮಸ್ಥರೊಬ್ಬರು ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ.

Forest Department ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು 4 ವರ್ಷದ ಗಂಡು ಚಿರತೆ ಮೃತಪಟ್ಟಿದ್ದು, ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಎಲ್. ಪರಶುರಾಮ್, ಉಪವಲಯ ಅರಣಯಾಧಿಕಾರಿಗಳಾದ ಜಿ. ಪರಶುರಾಮ್, ರಾಮಪ್ಪ, ಗಸ್ತು ಅರಣ್ಯಪಾಲಕರಾದ ಹರೀಶ್, ಆನಂದ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಈ ಸಂಬಂಧ ಜಮೀನಿನ ಮಾಲಿಕ ರಾಜು ಸಿ. ಕಳತ್ತೂರು ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಮೃತ ಚಿರತೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...