Wednesday, July 8, 2026
Wednesday, July 8, 2026

Actor Darshan ಮನೆಯೂಟಕ್ಕೆ ಮನವಿ ಮಾಡಿದ್ದ ದರ್ಶನ್ ಪರ ಅರ್ಜಿಗೆ ಕೋರ್ಟ್ ನಕಾರ

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ.

ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

Actor Darshan ಜೈಲೂಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...