Saturday, December 6, 2025
Saturday, December 6, 2025

Department of Horticulture ಹವಾಮಾನಾಧಾರಿತ ಬೆಳೆವಿಮೆ ಯೋಜನೆ ನೋಂದಾವಣೆಗೆ ಜುಲೈ 31 ಅಂತಿಮ ದಿನಾಂಕ- ಗುರುದತ್ತ ಹೆಗಡೆ

Date:

Department of Horticulture ತೋಟಗಾರಿಕೆ ಇಲಾಖೆಯಿಂದ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಜುಲೈ 23 ರಂದು ಸಭೆಯನ್ನು ನಡೆಸಿದರು.

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಬರುವ ಜಿಲ್ಲೆಯ ಬೆಳೆಗಳಾದ ಅಡಿಕೆ, ಮಾವು, ಕಾಳು ಮೆಣಸು ಮತ್ತು ಶುಂಠಿ ಬೆಳೆಯನ್ನು ಬೆಳೆದಂತಹ, ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಸಂರಕ್ಷಣೆ ತಂತ್ರಾಂಶದಲ್ಲಿ ನೊಂದಾಯಿಸಲು ಜುಲೈ 31 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ವಿಮೆ ನೊಂದಣಿ ಮಾಡುವ ಸಂದರ್ಭದಲ್ಲಿ ರೈತರು ಬೆಳೆದಿರುವಂತಹ ನೊಂದಾಯಿತ ಬೆಳೆಗಳು ಸಂರಕ್ಷಣೆ ತಂತ್ರಾಂಶದಲ್ಲಿ ಕಂಡು ಬಾರದ ಹಿನ್ನಲೆಯಲ್ಲಿ ಹಲವಾರು ರೈತರು ಹವಾಮಾನಾಧಾರಿತ ಬೆಳೆ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಲು ಸಾಧ್ಯವಾಗುತ್ತಿಲ್ಲ.

Department of Horticulture ಕಳೆದ ಎರಡು ವರ್ಷಗಳಲ್ಲಿ ಬೆಳೆ ಸಮೀಕ್ಷೆ ಪ್ರಕಾರ ನೊಂದಾಯಿತ ಬೆಳೆ ಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರು ಬೆಳೆ ಸಮೀಕ್ಷೆಯಲ್ಲಿ ನೊಂದಾಯಿತ ಬೆಳೆ ಕಂಡು ಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಜಿಲ್ಲಾಧಿಕಾರಿಗಳು ಆದೇಶಿಸುತ್ತಾ, ಜಿಲ್ಲೆಯ ರೈತರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...