Wednesday, October 2, 2024
Wednesday, October 2, 2024

Kateel Ashok Pai Memorial College ಬದಲಾದ ಆದ್ಯತೆಗಳನ್ನ ಗಮನಿಸಿ ಬಜೆಟ್ ತಯಾರಿ. ಪರಿವರ್ತನೆಯ ದೂರದೃಷ್ಟಿತ್ವಕ್ಕೆ ಈಗಿನ ಬಜೆಟ್ ಪೂರಕ- ಡಾ.ಶ್ರೀನಿವಾಸಮೂರ್ತಿ

Date:

Kateel Ashok Pai Memorial College ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ‘ಕೌಟಿಲ್ಯ ವೇದಿಕೆ’ ಹಾಗೂ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ‘ಬಜೆಟ್ 2024 ರ ವಿಶ್ಲೇಷಣೆ’ ಎಂಬ ವಿಶೇಷ ಉಪನ್ಯಾಸವನ್ನು ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಈ ಉಪನ್ಯಾಸಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಜೆಎನ್ ಎನ್ ಸಿ ಇ ಕಾಲೇಜಿನ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ ಮೂರ್ತಿಯವರು ಬಜೆಟ್ ವಿಶ್ಲೇಷಣೆ ಎಂಬುದು ಒಂದು ವೈಜ್ಞಾನಿಕ ಪ್ರಕ್ರಿಯೆ ಎಂದು ಹೇಳಿದರು. ಕೇಂದ್ರ ಸರ್ಕಾರ ಮಂಡಿಸಿದ 2024 ರ ಬಜೆಟ್‌ನ ಸೂಕ್ಷ್ಮ ಅಂಶಗಳ ವಿಶ್ಲೇಷಣೆಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಅವರು “ಭಾರತದ ಬಜೆಟ್ ಭಾರತದ ಸರ್ವತೋಮುಖ ಪ್ರಗತಿ ಹಾಗೂ ಅಭಿವೃದ್ಧಿಯ ದಿಕ್ಸೂಚಿ, ಬದಲಾಗುತ್ತಿರುವ ಕಾಲದಲ್ಲಿ ಬದಲಾದ ಆಲೋಚನಾಕ್ರಮ, ಬದಲಾದ ಆದ್ಯತೆಗಳನ್ನು ಗಮನಿಸಿ ಬಜೆಟ್‌ ಅನ್ನು ತಯಾರಿಸಬೇಕಾಗುತ್ತದೆ” ಎಂದು ಹೇಳುತ್ತಾ ಪರಿವರ್ತನೆಯ ದೂರದೃಷ್ಟಿತ್ವಕ್ಕೆ ಈ ಸಲದ ಬಜೆಟ್ ಪೂರಕವಾಗಿದೆಯೇ ಎಂಬುದನ್ನು ವಿಶ್ಲೇಷಿಸಲು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ ಡಾ.ಶ್ರೀನಿವಾಸಮೂರ್ತಿಯವರು ಡಿಜಿಟಲೀಕರಣ ಹಾಗೂ ಅದರ ಪಾತ್ರವನ್ನು ವಿವರಿಸಿದರು.

Kateel Ashok Pai Memorial College ಕಾಲೇಜಿನ ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಪ್ರೊ.ರಾಮಚಂದ್ರ ಬಾಳಿಗರವರು ಇದೊಂದು ಉತ್ತಮ ಉಪನ್ಯಾಸ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸಂಧ್ಯಾಕಾವೇರಿ ವಹಿಸಿದ್ದರು. ಇದರೊಂದಿಗೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಾದ ಶಂಕರ್ ಭಾರದ್ವಾಜ್, ಗೌಸ್‌ಪೀರ್ ಹಾಗೂ ನಿಸರ್ಗರವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಶಾಂತ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕಾವ್ಯ, ಉಪನ್ಯಾಸಕರಾದ ಶ್ರೀಮತಿ ವೀಣಾ ಭಟ್ ಹಾಗೂ ಶ್ರೀಮತಿ ಪ್ರಿಯಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಗೌಸ್‌ಪೀರ್ ಕಾರ್ಯಕ್ರಮವನ್ನು ನಿರೂಪಿಸಿ. ಬಿಂದಿಯ ಪ್ರಾರ್ಥಿಸಿ, ನಿಸರ್ಗ ಸ್ವಾಗತಿಸಿ, ತನುಶ್ರೀ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...