Tuesday, December 16, 2025
Tuesday, December 16, 2025

Kargil Vijay Divas ಆಂತರಿಕ ಸುರಕ್ಷೆ ಇದ್ದರೆ ದೇಶಕ್ಕೆ ಬಂಡವಾಳ ಹೂಡಿಕೆ ಯಥೇಚ್ಚ ಬರುತ್ತದೆ- ನಿ.ಸೇನಾಧಿಕಾರಿ ಶ್ರೀ ರಾಜೇಶ್

Date:

Kargil Vijay Divas ಸಮರ್ಥ ಸೇನೆ ಹೊಂದಿರುವ ದೇಶ ಆರ್ಥಿಕವಾಗಿ ಸುಭದ್ರವಾಗಿರುತ್ತದೆ. ಆಂತರಿಕ ಸುರಕ್ಷೆ ವಿಶ್ವಾಸನೀಯವಾಗಿದ್ದಾಗ ಆ ದೇಶಕ್ಕೆ ಬಂಡವಾಳ ಹೂಡಿಕೆ ಯಥೇಚ್ಛವಾಗಿ ಹರಿದುಬರುತ್ತದೆ. ಆ ಮೂಲಕ ಉದ್ಯೋಗಾವಕಾಶಗಳು ಹೆಚ್ಚಾಗಿ ಜನರು ಆರ್ಥಿಕವಾಗಿ ಸಬಲರಾಗುತ್ತಾರೆ. ದೇಶದ ಒಟ್ಟಾರೆ ಆದಾಯ ಹೆಚ್ಚಾಗಿ ಸೇನೆಗೆ ಉತ್ತಮ ಅನುದಾನ ಲಭಿಸಿ ಸೇನೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ಇಪ್ಪತ್ತು ವರ್ಷಗಳ ಕಾಲ ಭಾರತೀಯ ವಾಯುಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ನಿವೃತ್ತ ಸೇನಾಧಿಕಾರಿ ಶ್ರೀ ರಾಜೇಶ್ ಅಭಿಪ್ರಾಯಪಟ್ಟರು.

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕಾರ್ಗಿಲ್ ಯುದ್ಧ ನಡೆಯಲು ಕಾರಣವಾದ ಅಂಶಗಳ ಬಗ್ಗೆ ಉಲ್ಲೇಖಿಸಿ ಸೇನೆಯಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳನ್ನು ಅರಿಯಲು ಆ ಯುದ್ಧ ಹೇಗೆ ಸಹಾಯಕವಾಯಿತೆಂದು ತಿಳಿಸಿದರು. ಅಂತಹ ಸುಧಾರಣೆಗಳ ಪೈಕಿ ಕೇಂದ್ರ ಸರ್ಕಾರದ ಮಹತ್ತರ ಯೋಜನೆ ?ಅಗ್ನಿವೀರ್? ಸಹ ಒಂದು ಎಂದು ಹೇಳಿದರು. ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ರೋಟರಿಯಂತಹ ಸಂಸ್ಥೆಗಳು ನಿವೃತ್ತ ಸೇನಾಧಿಕಾರಿಗಳನ್ನು ಗುರುತಿಸಿ ಗೌರವಿಸುತ್ತಿರುವ ನಡೆಯನ್ನು ಶ್ಲಾಘಿಸಿದರು. ಇಪ್ಪತ್ತು ವರ್ಷಗಳ ಸೇವೆಯ ನಂತರ ಸ್ವಯಂ ನಿವೃತ್ತಿ ಪಡೆದ ಶ್ರೀ ರಾಜೇಶ್ ರವರು ಪ್ರಸ್ತುತ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ಲಬ್ ವತಿಯಿಂದ ಶ್ರೀ ರಾಜೇಶ್ ರವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸುವುದರ ಜೊತೆಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರೆಲ್ಲರೂ ಮೇಣದ ಬತ್ತಿ ಬೆಳಗುವುದರ ಮೂಲಕ ಕಾರ್ಗಿಲ್ ಹುತಾತ್ಮರಿಗೆ ಗೌರವ ಸೂಚಿಸಿದರು.

Kargil Vijay Divas ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ರೋಟರಿ ಮಾಜಿ ಗವರ್ನರ್ ಶ್ರೀ ಎಂ.ಜಿ.ರಾಮಚAದ್ರ ಮೂರ್ತಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮತ್ತೋರ್ವ ಮಾಜಿ ಗವರ್ನರ್ ಹಾಗೂ ಕ್ಲಬ್ ನ ಕಲಿಕಾ ಮಾರ್ಗದರ್ಶಿ ಶ್ರೀ ಹೆಚ್.ಎಲ್.ರವಿರವರು ಶ್ರೀ ಎಂ.ಜಿ.ರಾಮಚAದ್ರ ಮೂರ್ತಿಯವರಿಗೆ ನುಡಿ ನಮನ ಸಲ್ಲಿಸಿದರು. ರೋಟರಿ ಜೋನಲ್ ಲೆಫ್ಟಿನೆಂಟ್ ಮಂಜುಳಾ ರಾಜು, ಕ್ಲಮ್ ನ ಅಧ್ಯಕ್ಷರಾದ ರೊ.ಮುಸ್ತಾಕ್ ಅಲಿಶಾ, ಕಾರ್ಯದರ್ಶಿ ರೊ.ಶ್ರೀಕಾಂತ್ ಎ.ವಿ ಹಾಗೂ ಕ್ಲಬ್ ನ ಎಲ್ಲಾ ಸದಸ್ಯರು ಹಾಗೂ ಕುಟುಂಬದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...