Phone Pay ಬಾಪೂಜಿ ನಗರದ ಗಂಗಮ್ಮ ದೇವಸ್ಥಾನದ ಬಳಿ ಅಂಗಡಿಯೊಂದರಲ್ಲಿ ಫೋನ್ ಪೇ ಮೂಲಕ ಹಣ ಪಾವತಿ ವಿಚಾರವಾಗಿ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದೆ.
ಕಿರಣ ಮತ್ತು ರಾಘವೇಂದ್ರ ಗಾಯಗೊಂಡಿದ್ದಾರೆ. ರಾಘವೇಂದ್ರ ಅವರು ಅಂಗಡಿಯಲ್ಲಿ ಗುಟ್ಕಾ ಖರೀದಿಸಿ ಫೋನ್ ಪೇ ಮೂಲಕ ಹಣ ಪಾವತಿಸಲು ಮುಂದಾದರು.
Phone Pay ಪಕ್ಕದಲ್ಲಿದ್ದ ಐದಾರು ಯುವಕರು ಫೋನ್ ಪೇ ಮಾಡದಂತೆ ಸೂಚಿಸಿದ್ದಾರೆ. ಇದೇ ವಿಚಾರವಾಗಿ ರಾಘವೇಂದ್ರ ಮತ್ತು ಕಿರಣ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
