Shivamogga News ಗರ್ಭಿಣಿಯರಿಗೆ ಮುಖ್ಯವಾಗಿ ಪೌಷ್ಟಿಕ ಆಹಾರ ಅತ್ಯಂತ ಅಗತ್ಯವಿರುತ್ತದೆ. ಮಗುವಿನ ಪ್ರತಿ ಬೆಳವಣಿಗೆಗೂ ಪೌಷ್ಟಿಕಾಂಶತೆ ಅತಿ ಮುಖ್ಯವಾಗಿ ಸಹಕರಿಯಾಗುವಂತಹದ್ದು ಎಂದು ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ನ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.
Shivamogga News ಇಂದು ಹೊಸಮನೆ ಬಡಾವಣೆ ಸರ್ಕಾರಿ ಶಾಲೆಯ ಪಕ್ಕ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಧಾನ್ಯದ ಕಿಟ್ ಗಳನ್ನು ರೋಟರಿ ಶಿವಮೊಗ್ಗ ಸೆಂಟ್ರಲ್ ಕಬ್ ವತಿಯಿಂದ ವಿತರಿಸಿ ಮಾತನಾಡಿದ ಅವರು, ಪೌಷ್ಟಿಕಾಂಶತೆಗಳುಳ್ಳ ಆಹಾರವನ್ನು ತೆಗೆದುಕೊಳ್ಳುವುದು ಅತಿ ಮುಖ್ಯವಾಗಿರುತ್ತದೆ. ಇದರ ಜೊತೆಯಲ್ಲಿ ಸ್ವಚ್ಛತೆ ಹಾಗೂ ವ್ಯಾಯಾಮ ಅತ್ಯಂತ ಅಗತ್ಯವಾಗಿರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶ ಆಹಾರ ತೆಗೆದುಕೊಳ್ಳುವುದರಿಂದ ಹುಟ್ಟುವ ಮಗುವಿಗೆ ಎದೆ ಹಾಲಿನ ಕೊರತೆ ಇರುವುದಿಲ್ಲ. ಆ ನಿಟ್ಟಿನಲ್ಲಿ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ನ ವತಿಯಿಂದ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್ ಗಳನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.
