Thursday, March 19, 2026
Thursday, March 19, 2026

State Farmers Association ರೈತರ ಆಧಾರ್ ಸಂಖ್ಯೆ ಐಪಿ ಸೆಟ್ ಗೆ ಜೋಡಿಸುವ ಕ್ರಮ ಕಿರುಕುಳದ ಕ್ರಮ- ಎಚ್.ಆರ್.ಬಸವರಾಜಪ್ಪ

Date:

State Farmers Association ಐಪಿ ಸೆಟ್‌ಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕ್ರಮ ರೈತರಿಗೆ ತೊಂದರೆ ಕೊಡುವ ಉದ್ದೇಶವಾಗಿದೆ. ಆದ್ದರಿಂದ ಆಧಾರ್ ಕಾರ್ಡ್ ಜೋಡಣೆ ಮಾಡುವ ಕ್ರಮವನ್ನು ತಾವುಗಳು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿರುವ ರಾಜ್ಯ ರೈತ ಸಂಘ, ರೈತರು ಸಹ ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್‌ನ್ನು ವಿದ್ಯುತ್ ಚ್ಛಕ್ತಿ ಇಲಾಖೆಗೆ ಕೊಡಬಾರದೆಂದು ಮನವಿ ಮಾಡಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಸಂಘದ ರಾಜ್ಯಾಧ್ಯಕ್ಷ ಎಚ್. ಆರ್. ಬಸವರಾಜಪ್ಪ ಮತ್ತು ಮುಖಂಡರು,
ಚುನಾವಣೆ ಪೂರ್ವದಲ್ಲಿ ವಿದ್ಯುತ್‌ಚ್ಚಕ್ತಿ ಖಾಸಗೀಕರಣ ಮಾಡುವುದಿಲ್ಲವೆಂದು ಸರಕಾರ ಭರವಸೆ ಕೊಟ್ಟಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸರ್ಕಾರಕ್ಕೂ ಕೂಡ ವಿಧಾನಸಭೆಯಲ್ಲಿ ನಿರ್ಣಯವನ್ನು ಮಾಡಿ ಕೇಂದ್ರಕ್ಕೆ ಕಳುಹಿಸಿಬೇಕೆಂದು ಒತ್ತಾಯಿಸಿತ್ತು. ಪಕ್ಕದ ರಾಜ್ಯಗಳಾದ ಆಂಧ್ರ ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಸರ್ಕಾರಗಳು ವಿಧಾನಸಭೆಯಲ್ಲಿ ವಿದ್ಯುತ್ ಚ್ಚಕ್ತಿ ಖಾಸಗೀಕರಣ ಮಾಡುವುದಿಲ್ಲವೆಂದು ತೀರ್ಮಾನಿಸಿ ಕೇಂದ್ರಕ್ಕೆ ನಿರ್ಣಯವನ್ನು ಕಳುಹಿಸಿವೆ ಎಂದರು.

State Farmers Association ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೆ ಐ.ಪಿ ಸೆಟ್‌ಗಳು ರೈತರು ಉಪಯೋಗಿಸುತ್ತಿದ್ದಾರೆ. ೧೦ ಹೆಚ್.ಪಿ ಐ.ಪಿ ಸೆಟ್‌ಗಳಿಗೆ ಆಧಾರ್ ವರೆಗಿನ ಐ.ಪಿ ಸೆಟ್‌ಗಳಿಗೆ ವಿದ್ಯುತ್ ಚ್ಚಕ್ತಿ ದರ ಇಲ್ಲ. ಆದರೂ ಕಾರ್ಡ್ ಜೋಡಿಸಲು ಆದೇಶ ಮಾಡಿರುವುದರ ಉದ್ದೇಶವೇನು ಎಂದು ಪ್ರಶ್ನಿಸಿರುವ ಸಂಘ, ಆಧಾರ್ ಕಾರ್ಡ್ ಜೋಡಣೆ ಮಾಡುವುದರ ಹಿಂದೆ ವಿದ್ಯುಚ್ಚಕ್ತಿ ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ.. ಕೇಂದ್ರ ಸರ್ಕಾರ ಹಿಂದಿನ ಲೋಕಸಭೆಯಲ್ಲಿ ಖಾಸಗೀಕರಣ ಮಾಡುವ ಮಸೂದೆಯನ್ನು ಮಂಡಿಸಿ ಸದನ ಸಮಿತಿಗೆ ಕಳುಹಿಸಿದೆ ಎಂದು ಹೇಳಿದರು.

ಕೆಲವು ರೈತರದ್ದು ಪಹಣಿ ಖಾತೆ ಇಲ್ಲದ ಕಾರಣ ಆರ್.ಆರ್. ನಂಬರ್ ಸಿಕ್ಕಿರುವುದಿಲ್ಲ, ಇಂತಹ ರೈತರಿಗೆ ಆಧಾರ್ ಕಾರ್ಡ್ ನೊಂದಣಿ ಸಹ ಆಗುವುದಿಲ್ಲ. ಕರ್ನಾಟಕದಲ್ಲಿ 25 ಲಕ್ಷಕ್ಕೂ ಹೆಚ್ಚಿಗೆ ಐ.ಪಿ ಸೆಟ್‌ಗಳಿವೆ. ಹಿಂದೆ ಅಕ್ರಮ-ಸಕ್ರಮ ಯೋಜನೆಯಡಿ ಹಣ ಕಟ್ಟಿಸಿಕೊಂಡು ಕೊಡುತ್ತಿದ್ದರು. ಈಗ ಅದನ್ನು ನಿಲ್ಲಿಸಿ ಸ್ವಯಂ ವೆಚ್ಚ ಯೋಜನೆಯನ್ನು ಜಾರಿಗೆ ತಂದು ಒಬ್ಬ ಸಣ್ಣ ರೈತ ಐ.ಪಿ ಸೆಟ್‌ಗಾಗಿ 3 ರಿಂದ 4 ಲಕ್ಷ ಬಂಡವಾಳ ಹೂಡಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪ್ರ. ಕಾರ್ಯದರ್ಶಿ ಇ ಬಿ ಜಗದೀಶ, ಜಿಲ್ಲಾಧ್ಯಕ್ಷ ಕೆ. ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಹಸಿರು ಸೇನೆಯ ಜಿಲ್ಲಾ ಸಂಚಾಲಕ ಎಂ ಡಿ ನಾಗರಾಜ, ಗುರುಶಾಂತ್, ಕಸೆಟ್ಟಿ ರುದ್ರೇಶ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...