Friday, October 4, 2024
Friday, October 4, 2024

Wayanad landslides ವಯನಾಡು ಜಿಲ್ಲೆಯಲ್ಲಿ ಭೂಕುಸಿತ. ನೂರಕ್ಕೂ ಅಧಿಕ ಸಾವು. ಕೇರಳದಲ್ಲಿ ಶೋಕಾಚರಣೆ

Date:

Wayanad landslides ವಯನಾಡ್ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಭೂಕುಸಿತ ಉಂಟಾಗಿ ಸುಮಾರು 100 ರಷ್ಟು ಜನರು ಸಾವನ್ನಪ್ಪಿರುವ ಹಿನ್ನೆಲೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎರಡು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಿದ್ದಾರೆ

ಜುಲೈ 30 ಮಂಗಳವಾರ ಮತ್ತು ಜುಲೈ 31 ಬುಧವಾರದಂದು ಕೇರಳ ಸರ್ಕಾರ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಈ ಸಂದರ್ಭ ರಾಜ್ಯದ ಎಲ್ಲಾ ಕಡೆಗಳಲ್ಲಿ ರಾಷ್ಟ್ರಧ್ವಜ ಅರ್ಧದಲ್ಲಿ ಹಾರಾಡಲಿದೆ. ಈ ಎರಡೂ ದಿನಗಳಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಮತ್ತು ಇತರ ಆಚರಣೆಗಳನ್ನು ಮುಂದೂಡಲಾಗಿದೆ.

ಸಂಜೆ 6 ಗಂಟೆ ವೇಳೆಗೆ ವಯನಾಡ್ ದುರಂತದಲ್ಲಿ ಮೃತರ ಸಂಖ್ಯೆ 93ಕ್ಕೆ ತಲುಪಿತ್ತು.128 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು 98 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿತ್ತು.

Wayanad landslides ವರದಿಗಳ ಪ್ರಕಾರ ಸದ್ಯ ದುರಂತ ನಡೆದ ಸ್ಥಳಗಳಲ್ಲಿ ಒಂದಾದ ಮುಂಡಕ್ಕೈನಲ್ಲಿ ಎನ್‌ಡಿಆರ್‌ಎಫ್‌ನ 20 ಸದಸ್ಯರ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಭೂಕುಸಿತ ಸಂತ್ರಸ್ತರಿಗೆ ಆಹಾರ ಮತ್ತು ಇತರ ಸಾಮಗ್ರಿಗಳ ಪೂರೈಕೆಗೆ ರಾಜ್ಯದ ನಾಗರಿಕ ಸರಬರಾಜು ಇಲಾಖೆ ಕ್ರಮಕೈಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...