Thursday, March 19, 2026
Thursday, March 19, 2026

Ghataprabha river ನದಿ,ಜಲಪಾತಗಳ ಬಳಿ ಅನಗತ್ಯ “ಸೆಲ್ಫಿ ಹುಚ್ಚು” ಪ್ರದರ್ಶಿಸುವವರಿಗೆ “ಲಾಠಿ ರುಚಿ” ತೋರಿಸಲು ಸಚಿವರ ಸೂಚನೆ

Date:

Ghataprabha river ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಘಟಪ್ರಭಾ ನದಿಯಿಂದ ಪ್ರವಾಹ ಉಂಟಾಗಿದ್ದು, ವಿವಿಧ ಗ್ರಾಮಗಳಿಗೆ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Ghataprabha river ಈ ವೇಳೆ ಮಾತನಾಡಿದ ಅವರು, ಮೀನು ಹಿಡಿಯಲು, ಕೃಷಿ ಚಟುವಟಿಕೆ, ಸೆಲ್ಫಿಗಾಗಿ ಯಾರೂ ನದಿ ಅಥವಾ ಹೊಳೆಗೆ ಇಳಿಯಬಾರದು. ಒಂದು ವೇಳೆ ಒಳ್ಳೆ ಮಾತಿಗೆ ಗೌರವ ಕೊಡದೆ ನದಿಗೆ ಇಳಿದವರಿಗೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದರು.
ನಮ್ಮ ಪುಣ್ಯ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. 2019-20ರಲ್ಲಿ 272 ಮಂದಿ ಮಳೆಯ ಅಬ್ಬರದಿಂದ ಸಾವನ್ನಪ್ಪಿದ್ದರು. 2022 ರಲ್ಲಿ 249 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 243 ಸಾವುಗಳು ಸಂಭವಿಸಿವೆ. ಈ ಬಾರಿ, ಮಳೆಗೆ ಹೆಚ್ಚಿನ ಪ್ರಾಣಹಾನಿಯಾಗದಂತೆ ತಡೆಯಬೇಕು. ಅದಕ್ಕಾಗಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...