Monday, February 2, 2026
Monday, February 2, 2026

Ghataprabha river ನದಿ,ಜಲಪಾತಗಳ ಬಳಿ ಅನಗತ್ಯ “ಸೆಲ್ಫಿ ಹುಚ್ಚು” ಪ್ರದರ್ಶಿಸುವವರಿಗೆ “ಲಾಠಿ ರುಚಿ” ತೋರಿಸಲು ಸಚಿವರ ಸೂಚನೆ

Date:

Ghataprabha river ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಘಟಪ್ರಭಾ ನದಿಯಿಂದ ಪ್ರವಾಹ ಉಂಟಾಗಿದ್ದು, ವಿವಿಧ ಗ್ರಾಮಗಳಿಗೆ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Ghataprabha river ಈ ವೇಳೆ ಮಾತನಾಡಿದ ಅವರು, ಮೀನು ಹಿಡಿಯಲು, ಕೃಷಿ ಚಟುವಟಿಕೆ, ಸೆಲ್ಫಿಗಾಗಿ ಯಾರೂ ನದಿ ಅಥವಾ ಹೊಳೆಗೆ ಇಳಿಯಬಾರದು. ಒಂದು ವೇಳೆ ಒಳ್ಳೆ ಮಾತಿಗೆ ಗೌರವ ಕೊಡದೆ ನದಿಗೆ ಇಳಿದವರಿಗೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದರು.
ನಮ್ಮ ಪುಣ್ಯ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. 2019-20ರಲ್ಲಿ 272 ಮಂದಿ ಮಳೆಯ ಅಬ್ಬರದಿಂದ ಸಾವನ್ನಪ್ಪಿದ್ದರು. 2022 ರಲ್ಲಿ 249 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 243 ಸಾವುಗಳು ಸಂಭವಿಸಿವೆ. ಈ ಬಾರಿ, ಮಳೆಗೆ ಹೆಚ್ಚಿನ ಪ್ರಾಣಹಾನಿಯಾಗದಂತೆ ತಡೆಯಬೇಕು. ಅದಕ್ಕಾಗಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...