Wednesday, December 17, 2025
Wednesday, December 17, 2025

Ghataprabha river ನದಿ,ಜಲಪಾತಗಳ ಬಳಿ ಅನಗತ್ಯ “ಸೆಲ್ಫಿ ಹುಚ್ಚು” ಪ್ರದರ್ಶಿಸುವವರಿಗೆ “ಲಾಠಿ ರುಚಿ” ತೋರಿಸಲು ಸಚಿವರ ಸೂಚನೆ

Date:

Ghataprabha river ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಘಟಪ್ರಭಾ ನದಿಯಿಂದ ಪ್ರವಾಹ ಉಂಟಾಗಿದ್ದು, ವಿವಿಧ ಗ್ರಾಮಗಳಿಗೆ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Ghataprabha river ಈ ವೇಳೆ ಮಾತನಾಡಿದ ಅವರು, ಮೀನು ಹಿಡಿಯಲು, ಕೃಷಿ ಚಟುವಟಿಕೆ, ಸೆಲ್ಫಿಗಾಗಿ ಯಾರೂ ನದಿ ಅಥವಾ ಹೊಳೆಗೆ ಇಳಿಯಬಾರದು. ಒಂದು ವೇಳೆ ಒಳ್ಳೆ ಮಾತಿಗೆ ಗೌರವ ಕೊಡದೆ ನದಿಗೆ ಇಳಿದವರಿಗೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದರು.
ನಮ್ಮ ಪುಣ್ಯ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. 2019-20ರಲ್ಲಿ 272 ಮಂದಿ ಮಳೆಯ ಅಬ್ಬರದಿಂದ ಸಾವನ್ನಪ್ಪಿದ್ದರು. 2022 ರಲ್ಲಿ 249 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 243 ಸಾವುಗಳು ಸಂಭವಿಸಿವೆ. ಈ ಬಾರಿ, ಮಳೆಗೆ ಹೆಚ್ಚಿನ ಪ್ರಾಣಹಾನಿಯಾಗದಂತೆ ತಡೆಯಬೇಕು. ಅದಕ್ಕಾಗಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...