Sunday, August 2, 2026
Sunday, August 2, 2026

B.Y. Raghavendra ಕೊಲ್ಲೂರು ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಬೈಂದೂರಿನಲ್ಲಿ ಏರ್ ಪೋರ್ಟ್ ಸೌಲಭ್ಯಕ್ಕೆ ಸಂಸದ ರಾಘವೇಂದ್ರ ಮನವಿ

Date:

B.Y. Raghavendra ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಇಂದು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

B.Y. Raghavendra ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಅದಕ್ಕೋಸ್ಕರ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದರು

ಮನವಿಯ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಸಂಸದಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...