Tuesday, December 16, 2025
Tuesday, December 16, 2025

Central Military Commission ಡಿಫೆನ್ಸ್ ಕೋಟಾದಡಿ ಅರ್ಹ ವಿದ್ಯಾರ್ಥಿಗಳ ವೈದ್ಯಕೀಯ ವ್ಯಾಸಂಗಕ್ಕೆ ಅರ್ಜಿ ಸ್ವೀಕಾರ ದಿನಾಂಕ ಮುಂದೂಡಿಕೆ

Date:

Central Military Commission 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗ ಮಾಡಲು ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಜುಲೈ 20 ರವರೆಗೆ ನಿಗದಿಪಡಿಸಲಾಗಿದ್ದ ಅರ್ಜಿ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ) ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲತಾಣದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು 2024 ರ ಜುಲೈ 09 ರೊಳಗಾಗಿ ಸಲ್ಲಿಸಲು ಅವಧಿ ನಿಗದಿಪಡಿಸಲಾಗಿತ್ತು.

ಇದೀಗ ಈ ಸಮಯವನ್ನು
ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.
ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ.

Central Military Commission ಹಾಗೂ ಹೆಚ್ಚಿನ ಮಾಹಿತಿಗಾಗಿ
ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...