Monday, December 15, 2025
Monday, December 15, 2025

R.M. Manjunath Gowda ಒಳಜಗಳದಿಂದ ಬಿಜೆಪಿ & ಜೆಡಿಎಸ್ ಪಕ್ಷಗಳು ನಾಶವಾಗುತ್ತವೆ- ಆರ್.ಎಂ.ಮಂಜುನಾಥ ಗೌಡ

Date:

R.M. Manjunath Gowda ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುವುದಾಗಿ ಹೇಳಿಕೊಳ್ಳುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲೀಗ ಒಳ ಜಗಳ ಆರಂಭವಾಗಿದ್ದು, ಅವರವರ ಕಿತ್ತಾಟದಿಂದ ಎರಡೂ ಪಕ್ಷಗಳು ಅತೀ ಶೀಘ್ರದಲ್ಲೇ ನಾಶವಾಗುವುದರಲ್ಲಿ ಸಂದೇಹವಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಭವಿಷ್ಯ ನುಡಿದರು.

ತಾಲ್ಲೂಕಿನ ಅಂಜನಾಪುರ ಹಾಗೂ ಅಂಬ್ಲಿಗೊಳ್ಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,
ಲೋಕಸಭಾ ಚುನಾವಣೆ ಪೂರ್ವದಲ್ಲಿ ರಾಜ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಜೆಡಿಎಸ್ ಮುಖ್ಮಮಂತ್ರಿ ಸಿದ್ಧರಾಮಯ್ಯರವರ ವಿರುದ್ದ ಪಾದಯಾತ್ರೆ ನಡೆಸುವುದಕ್ಕೆ ಎರಡೂ ಪಕ್ಷಗಳ ಮುಖಂಡರು ಕಿತ್ತಾಟದಲ್ಲಿ ನಿರತರಾಗಿದ್ದಾರೆ.

ಹೆಚ್ ಡಿ ಕುಮಾರ್ ಸ್ವಾಮಿಯವರು ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ಡಿಕೆಶಿಯವರು ಸಿಡಿ ಹರಿಕಾರರು ಎಂದು ಸುಳ್ಳು ಆರೋಪ ಮಾಡುತ್ತಿದ್ದರು ಆದರೀಗ ಬಿಜೆಪಿಯ ಪ್ರೀತಮ್ ಗೌಡ್ರು ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಇವರು ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುವುದಾಗಿ ಹೇಳಿಕೊಳ್ಳುವ ಪಕ್ಷದಲ್ಲೀಗ ಒಳಜಗಳ ಆರಂಭವಾಗಿದ್ದು, ಅವರವರ ಕಿತ್ತಾಟದಿಂದ ಎರಡೂ ಪಕ್ಷಗಳು ಅತೀ ಶೀಘ್ರದಲ್ಲೇ ನಾಶವಾಗುವುದರಲ್ಲಿ ಸಂದೇಹವಿಲ್ಲ ಎಂದರು.

R.M. Manjunath Gowda ರಾಜ್ಯ ಸರ್ಕಾರವನ್ನು ಉರುಳಿಸುವ ಪ್ರಯತ್ನ ತಾಲ್ಲೂಕಿನ ಶಾಸಕರು ಕನಸು ಕಾಣುತ್ತಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷದವರೆಲ್ಲರೂ ಮುಖ್ಮಮಂತ್ರಿ ಸಿದ್ಧರಾಮಯ್ಯರವರ ಪರವಾಗಿರುವಾಗ ಸಾಧ್ಯವಿಲ್ಲದ ಮಾತು ಅವರ ಕನಸು ಕನಸಾಗಿಯೇ ಉಳಿಯುವುದು. ಈಹಿಂದೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರವು ಹೆಚ್ಚು ದಿನ ಉಳಿಯಲಿಲ್ಲ. ಈಗಲೂ ಸಹ ಇದು ಮುಂದುವರಿಯುತ್ತದೆ ಎಂಬ ನಂಬಿಕೆ ಸಾರ್ವಜನಿಕರಲ್ಲಿ ಉಳಿದಿಲ್ಲ. ಕೇಂದ್ರ ಸರ್ಕಾರದ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯವರು ಬಡವರ ದೀನದಲಿತರ ಪರವಾಗಿ ದ್ವನಿ ಎತ್ತುತ್ತಿದ್ದು ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸುಭದ್ರವಾಗಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...