Tuesday, December 16, 2025
Tuesday, December 16, 2025

Rotary Shivamogga ಶಿವಮೊಗ್ಗದ ರೋಟರಿ ಚಿತಾಗಾರದ ಆವರಣದಲ್ಲಿ ಪುಂಡರ ಹಾವಳಿ ತಡೆಯಲು ಮನವಿ

Date:

Rotary Shivamogga ಶಿವಮೊಗ್ಗನಗರದ ಮಂಜುನಾಥ್ ಗೌಡ ಪೂರ್ವ ಚಿತಾಗಾರದಲ್ಲಿ ಗಾಂಜಾ ಸೇವಿಸಿ ಪುಂಡರ ಹಾವಳಿ ಹೆಚ್ಚಾಗಿದೆ. ಇಲ್ಲಿ ಸಾರ್ವಜನಿಕರು ಒಡಾಡುವುದು ಕಷ್ಟವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್‌ರವರಿಗೆ ರೋಟರಿ ಚಿತಾಗಾರದ ಟ್ರಸ್ಟ್ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ರೋಟರಿ ಪೂರ್ವ ಚಿತಾಗಾರದ ಪಕ್ಕದ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪಡ್ಡೆ ಹುಡುಗರು ಚಿತಾಗಾರದಲ್ಲಿರುವ ಕಿಟಕಿಯ

Rotary Shivamogga ಗಾಜುಗಳನ್ನು ಒಡೆದು ಹಾಕುವುದು, ನಲ್ಲಿಗಳನ್ನು ಕೀಳುವುದು, ಕಿಟಕಿ ಫೇಮ್‌ಗಳನ್ನು ಕಳ್ಳತನ ಮಾಡುವುದರ ಜೊತೆಗೆ ಕಂಟ್ರಿ ಕ್ಲಬ್‌ಗೆ ಹೋಗಿ ಬರುವವರಿಗೆ ಹೆದರಿಸುವುದು ಹೆಚ್ಚಾಗಿದೆ. ಇದಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.
ಮನವಿ ಸಲ್ಲಿಸುವ ವೇಳೆ ರೋಟರಿ ಚಿತಾಗಾರದ ಟ್ರಸ್ಟ ನ ಪ್ರಭಾರ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪರಮೇಶ್ವರ್ ಡಿ. ಶಿಗ್ಗಾಂವ್, ಮಾಜಿ ಮ್ಯಾನೇಜಿಂಗ್ ಟ್ರಸ್ಟಿ . ಕಡಿದಾಳ್ ಗೋಪಾಲ್, ಉಪಾಧ್ಯಕ್ಷ ಸುರೇಶ್ ಕುಮಾರ್, ಖಜಾಂಚಿ ಜಿ.ವಿಜಯ್ ಕುಮಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...