Tuesday, March 24, 2026
Tuesday, March 24, 2026

Chamber Of Commerce Shivamogga ಕವಿ ಎಚ್. ಎಸ್. ವಿ. ಕವಿತೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ- ವಸಂತ ಹೋಬಳಿದಾರ್

Date:

Chamber Of Commerce Shivamogga ನಾಡು ಕಂಡ ಅತ್ಯಂತ ಶ್ರೇಷ್ಠ ಕವಿ ಡಾ. ಎಚ್.ಎಸ್.ವೆಂಕಟೇಶಮೂರ್ತಿ. ಸುಗಮ ಸಂಗೀತ ಕ್ಷೇತ್ರದಲ್ಲಿ ತಮ್ಮ ವಿಶೇಷ ಅರ್ಥಪೂರ್ಣ ಗೀತೆಗಳೊಂದಿಗೆ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ಮಥುರಾ ರಜತೋತ್ಸವ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಹೇಳಿದರು.
ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ, ಮಥುರಾ ರಜತೋತ್ಸವ ಸಮಿತಿ ಜಂಟಿಯಾಗಿ ಎಚ್‌ಎಸ್‌ವಿ ಅವರ 80ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಡಾ. ಎಚ್.ಎಸ್.ವೆಂಕಟೇಶಮೂರ್ತಿ ಅವರ ಗೀತಗಾಯನ ಸ್ಪರ್ಧೆಯ ಸಮಾರೋಪದಲ್ಲಿ ಮಾತನಾಡಿ, ಸಂಗೀತದಿಂದ ಸದಾ ಉಲ್ಲಾಸದಿಂದ ಇರುವುದರ ಜತೆಗೆ ಧ್ವನಿ ಸಂಸ್ಕರಣಗೊಳ್ಳುತ್ತದೆ. ಸದಾ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
Chamber Of Commerce Shivamogga ಇದೇ ಸಂದರ್ಭದಲ್ಲಿ ಸುಗಮ ಸಂಗೀತ ಪರಿಷತ್ ಗೌರವಾಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಮಥುರಾ ಪಾರಾಡೈಸ್ ರಜತ ಮಹೋತ್ಸವ ಅಂಗವಾಗಿ 50 ಸಂಸ್ಥೆಗಳ ಆಶ್ರಯದಲ್ಲಿ ಸಮಾಜಮುಖಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 6ನೇ ಕಾರ್ಯಕ್ರಮವಾಗಿದೆ. ಸುಗಮ ಸಂಗೀತ ಪರಿಷತ್‌ಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಶೆಟ್ಟಿ ಗೀತಗಾಯನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಸುಪ್ರಿಯಾ ಸಂತೋಷ್ ಪ್ರಥಮ ಬಹುಮಾನ, ಶ್ವೇತಾ ಪಾಟೀಲ್ ದ್ವಿತೀಯ ಬಹುಮಾನ, ಎಂ.ಸುಜಾತಾ, ವರ್ಷಿಣಿ ಭಟ್‌ಗೆ ನಗದು ಬಹುಮಾನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಪರಿಷತ್ ಸದಸ್ಯರಿಂದ ಡಾ. ಎಚ್.ಎಸ್.ವೆಂಕಟೇಶಮೂರ್ತಿ ಅವರ ಗೀತೆಗಳ ಗಾಯನ ನೆರವೇರಿತು. ಜಿಲ್ಲಾ ಖಜಾಂಚಿ ಜಿ.ವಿಜಯಕುಮಾರ್, ಕಾರ್ಯದರ್ಶಿ ಕೆ.ಎಸ್.ಮಂಜುನಾಥ, ಸಂಚಾಲಕರಾದ ಭದ್ರಾವತಿ ವಾಸು, ಸಹ ಕಾರ್ಯದರ್ಶಿ ತ್ರಿವೇಣಿ, ಸಹ ಸಂಚಾಲಕರಾದ ಶೋಭಾ ಸತೀಶ್, ವಿದುಷಿ ಲಲಿತಮ್ಮ, ಜಯಶ್ರೀ ಶ್ರೀಧರ್, ದಾಕ್ಷಾಯಿಣಿ, ರಾಜಕುಮಾರ, ಮಥುರಾ ನಾಗರಾಜ್, ಉಮಾ ದಿಲೀಪ್, ಲಕ್ಷ್ಮೀ ಮಹೇಶ್, ಹೇಮಾ ವರ್ಷಿಣಿ, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...