Wednesday, July 8, 2026
Wednesday, July 8, 2026

Kateel Ashok Pai College ಕಾಡುವ ಹುಡುಗನ ಹಾಡು” ಪುಸ್ತಕ ಸಾಹಿತ್ಯಕ್ಷೇತ್ರದಲ್ಲಿ ಹೊಸ ಬರಹಗಳಿಗೆ ನಾಂದಿಯಾಗಲಿ- ಡಾ.ಭಾರತಿ ದೇವಿ

Date:

Kateel Ashok Pai College ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಉಪನ್ಯಾಸಕಿ ಅಂಜುಮ್
ಬಿ.ಎಸ್. ಅವರ ಕಾಡುವ ಹುಡುಗನ ಹಾಡು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಆಗಸ್ಟ್ 07 ಬುಧವಾರದಂದು ಬಹುಮುಖಿ ಸಭಾಂಗಣದಲ್ಲಿ ನಡೆಸಲಾಯಿತು.

ಹೊಳೆಹೊನ್ನೂರು ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕರಾಗಿರುವ ಭಾರತಿ ದೇವಿ ಅವರು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಅಂಜುಮ್ ಅವರ ಪುಸ್ತಕ ಅಕ್ಕಮಹಾದೇವಿಯವರ ಬರಹಗಳನ್ನ ಮತ್ತೊಮ್ಮೆ ನೆನಪಿಸುತ್ತದೆ. ಒಬ್ಬ ಹೆಣ್ಣು ಮಗಳು ದಿಟ್ಟವಾಗಿ ತನ್ನ ನಿಲುವನ್ನ ಪುಸ್ತಕದ ಮೂಲಕ ಹೇಳಿರುವುದು ಇಲ್ಲಿ ಕಾಣಸಿಗುತ್ತದೆ. ಕಾಡುವ ಹುಡುಗನ ಹಾಡು ಪುಸ್ತಕ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಬರಹಗಳ ಮೂಲಕ ನಾಂದಿ ಹಾಡಲಿ‌. ಮುಂಬರುವ ದಿನಗಳಲ್ಲಿ ಯುವ ಲೇಖಕಿಯಿಂದ ಇನ್ನಷ್ಟು ಪುಸ್ತಕ ಗಳನ್ನ ಹೊರಹೊಮ್ಮುಲಿ ಎಂದು ಆಶಿಸಿದರು.

ಕೀಳಂಬಿ ಸಮೂಹ ಉದ್ಯಮಗಳ ನಿರ್ದೇಶಕರಾದ ರಾಜೇಶ್ ಕೀಳಂಬಿ ಇವರು ಪುಸ್ತಕ ಪರಿಚಯಯನ್ನು ಮಾಡಿ ಕೊಟ್ಟು , ಹುಡುಗನ ಹಾಡು ಪುಸ್ತಕವನ್ನು ಓದಿದಾಗ ಹಳೆಯ ಕಾಲೇಜು ದಿನಗಳು ಮರುಕಳಿಸುತ್ತವೆ. ಒಬ್ಬ ಹೆಣ್ಣು ಮಗಳು ತನ್ನ ಪ್ರೀತಿಯನ್ನು ವ್ಯಕ್ತಪಡಿಸಿರುವ ರೀತಿ ವಿಭಿನ್ನವಾಗಿದೆ. ಕಾಡುವ ಹುಡುಗನ ಹಾಡು ಪುಸ್ತಕವು ಸಾಹಿತ್ಯ ಲೋಕದಲ್ಲಿ ಹೊಸ ಶಕೆಯನ್ನು ಸೃಷ್ಟಿಸಲಿದೆ. ಕನ್ನಡದಲ್ಲಿ ಇದೊಂದು ಹೊಸ ಪ್ರಯತ್ನವಾಗಿದ್ದು, ಪುಸ್ತಕವು ಹೆಚ್ಚು ಪ್ರಖ್ಯಾತಿ ಪಡೆಯಲಿ ಎಂದರು.

ಕಾಲೇಜಿನ ಶೈಕ್ಷಣಿಕ ಸಲಹೆಗಾರರು ಹಾಗೂ ಹಿರಿಯ ಸಾಹಿತಿಗಳಾದ ಡಾ.ರಾಜೇಂದ್ರ ಚೆನ್ನಿಯವರು ಮಾತನಾಡಿ, ಯುವ ಲೇಖಕರು ಕೇವಲ ಒಂದೇ ಪ್ರಕಾರದ ಪುಸ್ತಕಗಳನ್ನು ಬರೆಯದೇ ಎಲ್ಲಾ ರೀತಿಯ ಬರಹಗಳಿಗೆ ಒತ್ತು ನೀಡಬೇಕು ಎಂದರು.

Kateel Ashok Pai College ಸುವ್ವಿ ಪಬ್ಲಿಕೇಷನ್ಸ್ ಪ್ರಕಾಶನದ ಪ್ರಕಾಶಕರಾದ ಸುನೀಲ್.ಬಿ‌.ಎನ್‌. ಅವರು ಮಾತನಾಡಿ, ಇಂದಿನ ಯುವ ಪೀಳಿಗೆ ಕೇವಲ ವಾಟ್ಸಾಪ್, ಪೇಸ್ಬುಕ್ ನಲ್ಲಿಯೇ ಕಾಲಕಳೆಯುತ್ತಿರುವುದು ವಿಪರ್ಯಾಸ.. ವಿಧ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಶಿವಮೊಗ್ಗದ ಕೆ ಲೈವ್ ನ್ಯೂಸ್ ನ ಪ್ರಧಾನ ಸಂಪಾದಕರಾದ ಡಾ‌.ಸುಧೀಂದ್ರ ಅವರು ಮಾತನಾಡಿ, ಕಾಡುವ ಹುಡುಗನ ಹಾಡು ಪುಸ್ತಕ ಯುವ ಮನಸ್ಸುಗಳಿಗೆ ಇಷ್ಟವಾಗುವ ಪುಸ್ತಕವಾಗುವಲ್ಲಿ ಎರಡು ಮಾತಿಲ್ಲ. ಕವನವೂ ಅಲ್ಲದೇ , ಶಾಯರಿಯೂ ಆಗದೇ ಹೊಸ ರೀತಿಯ ಬರಹಗಳು ಇದಾಗಿದೆ. ಅನುಭವ, ಪ್ರೀತಿ ಎಲ್ಲವನ್ನೂ ಒಳಗೊಂಡಿರುವ ಪುಸ್ತಕ ಓದುಗರನ್ನು ಸೆಳೆದಿಟ್ಟುಕೊಳ್ಳುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿಯವರು ಮಾತನಾಡಿ , ಕಟೀಲ್ ಅಶೋಕ್ ಪೈ ಕಾಲೇಜಿನ ಉಪನ್ಯಾಸಕಿ ಯಾದ ಅಂಜುಮ್ ಇವರ ಚೊಚ್ಚಲ ಕೃತಿ ಕಾಲೇಜಿನಲ್ಲಿಯೇ ಲೋಕಾರ್ಪಣೆಗೊಂಡಿರುವುದು ಸಂತಸದ ವಿಷಯ. ಕಾಡುವ ಹುಡುಗನ ಹಾಡು ಪುಸ್ತಕ ಹಲವಾರು ಬಗೆಯಲ್ಲಿ ವಿಭಿನ್ನವಾಗಿ ನಿಲ್ಲುತ್ತದೆ. ಯುವ ಲೇಖಕಿಯ ಈ ಹೊಸ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಉಪನ್ಯಾಸಕ ವೃಂದ, ಗುರು ಹಿರಿಯರು, ಸಿಬ್ಬಂದಿಗಳು, ವಿಧ್ಯಾರ್ಥಿಗಳು ,ಹಾಗೂ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...