Thursday, December 18, 2025
Thursday, December 18, 2025

CM Siddharamaih ಶೋಷಿತ ವರ್ಗಗಳ ಮಹಾ ಒಕ್ಕೂಟದ ಕಾರ್ಯಕರ್ತರಿಂದ ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆ

Date:

CM Siddharamaih ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಂಜಪ್ಪ ಬಡಾವಣೆಯ ಮನೆಗೆ ಗುರುವಾರ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿತು.
ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.

ಪ್ರತಿಭಟನಾಕಾರರು ಸಿದ್ದರಾಮಯ್ಯ ಅವರ ಭಾವಚಿತ್ರ ಹಿಡಿದು ವಿಜಯೇಂದ್ರ ಸೇರಿದಂತೆ ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಹಾಗೂ ಸಿದ್ದರಾಮಯ್ಯ ಪರ ಘೋಷಣೆ ಕೂಗಿದರು. ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕದಂತೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.

ಬ್ಯಾರಿಕೇಡ್ ನೂಕಿ ಪ್ರತಿಭಟನಾಕಾರರು ಮುಂದೆ ಸಾಗಿದರು. ಎರಡನೇ ಬ್ಯಾರಿಕೇಡ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರೂ ಬ್ಯಾರಿಕೇಡ್ ಮೇಲೆ ಹತ್ತಿ ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಎಲ್ಲಾ ಪ್ರತಿಭಟನಗಾರರನ್ನು ಬಂಧಿಸಿ, ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು.

ಈ ವೇಳೆ ಮಾತನಾಡಿದ ಒಕ್ಕೂಟದ ಸಂಚಾಲಕ ಕೆ.ರಂಗನಾಥ್, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಮುಡಾದ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ, ಪಾದಯಾತ್ರೆ ನಡೆಸುತ್ತಿದ್ದಾರೆ. ಇವರ ಮೇಲೆಯೇ ಸಾಕಷ್ಟು ಆರೋಪಗಳು ಇರುವಾಗ ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ. ಇದರಿಂದ ನಾವು ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದೇವೆ” ಎಂದು ತಿಳಿಸಿದರು.

CM Siddharamaih ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎಂ.ಶರತ್ ಪಾಲಕ್ಷ, ಉಮೇಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...