Thursday, December 18, 2025
Thursday, December 18, 2025

CM Shivakumar ಈ ಬಂಡೆ ಸಿದ್ಧರಾಮಯ್ಯನವರ ಜೊತೆಗೆ ಸದಾ ಇದೆ- ಡಿಸಿಎಂ ಶಿವಕುಮಾರ್

Date:

CM Shivakumar “ಮಾಧ್ಯಮದವರು ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಾರೆ. ಈ ಬಂಡೆ ಸಿದ್ದರಾಮಯ್ಯನವರ ಜೊತೆ ಸದಾ ಇದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ.

ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ಗುಡುಗಿದರು.

CM Shivakumar “ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.
“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ.

ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...