Sunday, December 7, 2025
Sunday, December 7, 2025

Nagar Panchami ಹುತ್ತದಿಂಬ ಗ್ರಾಮದಲ್ಲಿ ಹಾವು ಕಡಿತಕ್ಕೆ ಬಾಣಂತಿ ಬಲಿ

Date:

Nagar Panchami ನಾಗರ ಪಂಚಮಿ ದಿನ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಸಾಗರ ತಾಲ್ಲೂಕುನಲ್ಲಿ ವರದಿಯಾಗಿದೆ
ನಾಗರ ಪಂಚಮಿ
ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

Nagar Panchami ರಂಜಿತಾ ಎಂಬ 22 ವರ್ಷದ ಮಹಿಳೆ ಮೃತ ನಿವಾಸಿ
ಜಾನುವಾರುಗೆ ಮೇವು ತರಲು ಎಂದು ಹೊಲಕ್ಕೆ ಹೋಗಿದ್ದ ಇವರಿಗೆ ಅಲ್ಲಿಯೇ ಪೊದೆಯಲ್ಲಿದ್ದ ಹಾವೊಂದು ಕಚ್ಚಿದೆ. ಮೊದಲು ಮಹಿಳೆಗೆ ಹಾವು ಕಚ್ಚಿರುವ ಬಗ್ಗೆ ಗೊತ್ತಾಗಲಿಲ್ಲ. ಆ ಬಳಿಕ ನಂಜು ಏರಿ ಹೊಲದಲ್ಲಿಯೇ ರಂಜಿತಾ ಕುಸಿದು ಬಿದ್ದಿದ್ದಾಳೆ.
ಕೆಲಹೊತ್ತು ಬಿಟ್ಟು ಮನೆಯವರು ಗದ್ದೆಗೆ ಬಂದು ನೋಡಿದಾಗ ರಂಜಿತಾ ಕುಸಿದು ಬಿದ್ದಿರುವುದು ಗೊತ್ತಾಗಿದೆ. ತಕ್ಷಣವೇ ಅವರನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾಗರ ಉಪವಿಭಾಗೀಯ ಆಸ್ಪತ್ರೆ
ಅಲ್ಲಿನ ವೈದ್ಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ಆಕೆಯನ್ನು ಕರೆತರುವ ಸಂದರ್ಭದಲ್ಲಿ ಮಾರ್ಗಮಧ್ಯೆ ರಂಜಿತಾ ಸಾವನ್ನಪ್ಪಿದ್ದಾರೆ.
ಮೂರು ವರುಷದ ಮಗುವನ್ನ ಹೊಂದಿರುವ ರಂಜಿತಾರಿಗೆ ಎರಡನೇ ಹೆರಿಗೆಯಾಗಿ ನಾಲ್ಕು ತಿಂಗಳಷ್ಟೆ ಕಳೆದಿತ್ತು.

ಇದೀಗ ಇಬ್ಬರು ಮಕ್ಕಳು ತಾಯಿಯನ್ನ ಕಳೆದುಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...