Friday, March 20, 2026
Friday, March 20, 2026

Vishwa Hindu Parishad ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಸಾಧ್ಯವಿರುವ ಕ್ರಮ ಕೈಗೊಳ್ಳಲು “ವಿಹಿಂಪ” ಒತ್ತಾಯ

Date:

Vishwa Hindu Parishad ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್‌ ಭಾರತ ಸರ್ಕಾರವನ್ನು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿಹಿಂಪ ಜಿಲ್ಲಾಧ್ಯಕ್ಷ ಜೆ ಆರ್ ವಾಸುದೇವ, ಭೀಕರ ಪರಿಸ್ಥಿತಿಯ
ಲಾಭವನ್ನು ಪಡೆದುಕೊಂಡು, ಗಡಿಯಾಚೆಯಿಂದ ಭಾರತಕ್ಕೆ ಒಳನುಸುಳುವಿಕೆ ಪ್ರಯತ್ನವನ್ನು ಮಾಡಬಹುದು. ಇದನ್ನು ಭಾರತ ಸರಕಾರ ಗಂಭೀರವಾಗಿ ಪರಿಗಣಿಸಿ ಭದ್ರತಾ ಪಡೆಗಳ ಮೂಲಕ ಭಾರತ ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ರೀತಿಯ ಅತಿಕ್ರಮಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

Vishwa Hindu Parishad ಈಗಾಗಲೇ ಅಸ್ತಿತ್ವಕ್ಕೆ ಬಂದಿರುವ ಬಾಂಗ್ಲಾದ ಹೊಸ ಸರ್ಕಾರ ಅಲ್ಲಿನ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡಬೇಕು ಹಾಗೂ ದಾಳಿಯಿಂದ ನಾಶಗೊಂಡಿರುವ ಹಿಂದೂ ಮನೆಗಳು ಹಾಗೂ ದೇವಾಲಯಗಳನ್ನು ಪುನರ್ ನಿರ್ಮಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಸರಕಾರ ಸಹಿತ ವಿಶ್ವ ಸಮುದಾಯ ಬಾಂಗ್ಲಾದೇಶದ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ವಿಶ್ವ ಹಿಂದೂ ಪರಿಷದ್
ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ.

ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಗೃಹ ಸಚಿವರು ವ್ಯಕ್ತಪಡಿಸಿದ್ದಾರೆ. ಮತ್ತು ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಕೂಡ ತುರ್ತು ಸಹಾಯವಾಣಿ ಸ್ಥಾಪಿಸಲು ನಿರ್ಧರಿಸಿದೆ. ಅದರ ಸಂಖ್ಯೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...