Monday, May 4, 2026
Monday, May 4, 2026

Acharya Tulsi National College of Commerce ಜಗತ್ತು ಬದಲಾಯಿಸಬೇಕೆಂಬ ಹಂಬಲ ಗಾಂಧೀಜಿಯಲ್ಲಿತ್ತು. ಅವರದ್ದು ಪ್ರಯೋಗಶೀಲ ಜೀವನ- ಲಕ್ಷ್ಮೀಶ ತೋಳ್ಪಾಡಿ

Date:

Acharya Tulsi National College of Commerce ಮಹಾತ್ಮ ಗಾಂಧೀಜಿ ವಿಚಾರಧಾರೆಯನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳದೇ ಇರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಆಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಗಾಂಧಿ ತತ್ವ ಪ್ರಣೀತ ಯುವಜನ ಶಿಬಿರದಲ್ಲಿ ಮಾತನಾಡಿದರು.

ಗಾಂಧೀಜಿ ತತ್ವಗಳನ್ನು ಎಲ್ಲರೂ ಅವರ ಅನುಕೂಲಕ್ಕೆ ತಕ್ಕಂತೆ ಕೇಳುತ್ತಿದ್ದಾರೆ. ಇಂತಹ ಮನಃಸ್ಥಿತಿ ಬದಲಾವಣೆ ಆಗುವ ಅಗತ್ಯವಿದೆ. ಈ ಮೂಲಕ ಸದೃಢ ಸಮಾಜ ಕಟ್ಟಲು ಸಾಧ್ಯ.ವಾಗುತ್ತದೆ. ವಿಶೇಷವಾಗಿ ಯುವ ಜನತೆ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಜಗತ್ತು ಬದಲಾಯಿಸಬೇಕೆಂಬ ಹಂಬಲ ಗಾಂಧೀಜಿ ಅವರಲ್ಲಿತ್ತು. ಗಾಂಧೀಜಿ ಅವರ ಜೀವನ ಪ್ರಯೋಗಶೀಲತೆಯಿಂದ ಕೂಡಿತ್ತು. ಅಂದರೆ ಅದು ತಪ್ಪಾಗುವುದಿಲ್ಲ ಎಂದರು.

ಯುವಜನತೆ ಗಾಂಧೀಜಿಯ ತತ್ವ ಆದರ್ಶಗಳನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿದೆ. ಎಲ್ಲರೂ ಸತ್ಯದ ಕಡೆಗೆ ನಡೆಯಬೇಕು ಆಗ ಮಾತ್ರ ಬದಲಾವಣೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಗಾಂಧೀಜಿ ಜೀವನದ ಆದರ್ಶಗಳನ್ನು ಜನರು ಸರಿಯಾಗಿ ಗ್ರಹಿಸಬೇಕು. ಇದರಿಂದ ತುಂಬಾ ಅನುಕೂಲವಾಗುತ್ತದೆ. ಹೊಸ ಬದಲಾವಣೆಗೂ ಮುನ್ನುಡಿ ಬರೆಯಬಹುದು ಎಂದು ಹೇಳಿದರು.

Acharya Tulsi National College of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಸರ್ವ ಕಾಲಕ್ಕೂ ಗಾಂಧೀಜಿ ಅವರ ಜೀವನದ ಪ್ರಮುಖ ತತ್ವ ಆದರ್ಶಗಳು ಪ್ರಸ್ತುತ ಆಗಿರುತ್ತವೆ ಎಂದು ತಿಳಿಸಿದರು.

ಎಂ.ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜನಾಧಿಕಾರಿ ಶುಭಾ ಮರವಂತೆ, ಶಿಬಿರದ ಸಂಚಾಲಕ ಪ್ರೊ. ಕೆ.ಎಂ.ನಾಗರಾಜ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...