Wednesday, August 12, 2026
Wednesday, August 12, 2026

Agnipath Scheme ಅಗ್ನಿಪಥ್ ಯೋಜನೆಯ ವಿವಿಧ ಹುದ್ದೆಗಳ ದೈಹಿಕ & ವೈದ್ಯಕೀಯ ಪರೀಕ್ಷೆ ನೇಮಕಾತಿ ಪ್ರಕ್ರಿಯೆ ಆಗಸ್ಟ್ 22 ರಿಂದ 31 ವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ.

Date:

Agnipath Scheme 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ.

Agnipath Scheme ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂಬುದನ್ನು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...