Saturday, March 21, 2026
Saturday, March 21, 2026

Kadidal Gopal ಒಕ್ಕಲಿಗರ ಸಂಘಟನೆಯಲ್ಲಿ ಉನ್ನತ ಸೇವೆ ಸಲ್ಲಿಸುವೆ- ಕಡಿದಾಳ್ ಗೋಪಾಲ್

Date:

ಡಾ. ಕಡಿದಾಳ್ ಗೋಪಾಲ್ ಅವರಿಗೆ ಸನ್ಮಾನ

Kadidal Gopal ಯಾವುದೇ ಪ್ರಚಾರ ಇಲ್ಲದೆ ಹೆಚ್ಚು ಮತ ಗಳಿಸಿದ ಕಡಿದಾಳ ಗೋಪಾಲರಿಗೆ ಶ್ರೀನಿಧಿ ಎಜುಕೇಶನ್ ಟ್ರಸ್ಟ್ ಹಾಗೂ ಸಹ್ಯಾದ್ರಿ ಪ್ರೌಢಶಾಲೆಯ ಶಿಕ್ಷಕರ ವತಿಯಿಂದ ಹಾಗೂ ಇಂಟರ್ ಆಕ್ಟ್ ಕ್ಲಬ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಹತ್ತು ವರ್ಷಗಳ ನಂತರ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೆಡದ ಚುನಾವಣೆಯಲ್ಲಿ ಕಡಿದಾಳ್ ಗೋಪಾಲರ ಸಿಂಡಿಕೇಟಿಗೆ ಬಹುಮತ ಲಭಿಸಿ ಎಲ್ಲರೂ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಡಾ. ಕಡಿದಾಳ ಗೋಪಾಲ್ ಮಾತನಾಡಿ, ಜನರು ನಮ್ಮ ತಂಡದ ಮೇಲೆ ಇಟ್ಟ ಭರವಸೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಹಾಗೂ ಬರುವ ದಿನಗಳಲ್ಲಿ ಪ್ರಾಮಾಣಿಕವಾಗಿ ಸಂಘದ ಸೇವೆ ಮಾಡುತ್ತಾ ಸಂಘವನ್ನು ಇನ್ನೂ ಅತಿ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ನುಡಿದರು.

Kadidal Gopal ಈ ವೇಳೆ ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಡಾ. ಕಡಿದಾಳ್ ಗೋಪಾಲ್ ಅವರು ರೋಟರಿಯ ಮಹಾದಾನಿ. ಅವರು ಹಲವಾರು ಸಂಘಟನೆಗಳಲ್ಲಿ ಸಮಾಜಮುಖಿಯಾಗಿ ದೊಡ್ಡ ಮಟ್ಟದ ಸೇವೆಯನ್ನು ಸಲ್ಲಿಸಿರುವುದು ಶ್ಲಾಘನೀಯ ಎಂದು ನುಡಿದರು.

ಸಮಾರಂಭದಲ್ಲಿ ಟ್ರಸ್ಟಿನ ನಿರ್ದೇಶಕ ಕೋಳಿಗೆ ವಾಸಪ್ಪ ಗೌಡ, ಶಿವಮೊಗ್ಗ ಜಿಲ್ಲೆಯ ವಾಣಿಜ್ಯ ಮತ್ತು ರೋಟರಿ ಅಧ್ಯಕ್ಷ ಅರುಣ್ ದೀಕ್ಷಿತ್, ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಸಲ್ಮಾ, ಶಶಿಗಿರಿಗೌಡ, ಡಾ. ಧನಂಜಯ ರಾಂಪುರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...