Friday, September 27, 2024
Friday, September 27, 2024

Independence Day ವೈಯಕ್ತಿಕ ಹಿತಕ್ಕೆ ಸೀಮಿತವಾಗದೇ ರಾಷ್ಟ್ರಹಿತದತ್ತ ಮುಖ ಮಾಡುವುದೇ ಸ್ವಾತಂತ್ರ್ಯ ದಿನಾಚರಣೆ- ಡಾ.ಎಚ್.ಬಿ.ಮಂಜುನಾಥ್

Date:

Independence Day ದೇಶದ ಪ್ರತಿ ಪ್ರಜೆಯೂ ತಮ್ಮ ಚಿಂತನೆ, ನಿರ್ಧಾರ ಹಾಗೂ ಕಾರ್ಯಗಳನ್ನು ವೈಯಕ್ತಿಕ ಹಿತಕ್ಕೆ ಸೀಮಿತ ಮಾಡದೆ ರಾಷ್ಟ್ರ ಹಿತ ದತ್ತ ಮುಖ ಮಾಡುವುದೇ ಸ್ವಾತಂತ್ರ್ಯ ದಿನಾಚರಣೆಯಾಗಬೇಕು ಎಂದು ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಆಶಯ ವ್ಯಕ್ತಪಡಿಸಿದರು. ದಾವಣಗೆರೆ ನಗರದ ಸೇಂಟ್ ಜಾನ್ಸ್ ಶಾಲೆಯಲ್ಲಿ ಭಾರತದ 78ನೇ ಸ್ವಾತಂತ್ರೋತ್ಸವದ ಆಚರಣೆಯ ಮುಖ್ಯ ಅತಿಥಿಗಳಾಗಿ ಧ್ವಜಾರೋಹಣ ನೆರವೇರಿಸಿ ಶಾಲಾ ಮಕ್ಕಳ ಕವಾಯತಿನ ಗೌರವ ವಂದನೆ ಸ್ವೀಕರಿಸಿ ಮಾತನಾಡುತ್ತಾ ನಮ್ಮ ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಲಕ್ಷಾಂತರ ಹೋರಾಟಗಾರರು ರಾಷ್ಟ್ರ ಕ್ಕಾಗಿ ತಮ್ಮ ಬಲಿದಾನ ಮಾಡಿದರೆ ವಿನಹ ದುಷ್ಟ ಆಡಳಿತದ ಬ್ರಿಟಿಷರನ್ನು ಬಲಿಪಡೆಯಲಿಲ್ಲ. ಅನೇಕ ಬಾರಿ ಪರಕೀಯರ ದಬ್ಬಾಳಿಕೆ ಹಾಗೂ ಆಡಳಿತಕ್ಕೆ ಒಳಪಟ್ಟರೂ independence-day ನಮ್ಮ ಭಾರತ ತನ್ನ ತಾಳುವ ಹಾಗೂ ಬಾಳುವ ಸುಸಾಮರ್ಥ್ಯದಿಂದ ತನ್ನ ಅಮೂಲ್ಯ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿದೆ. ಇಂತಹ ಭಾರತ ವಿಶ್ವನಾಯಕತ್ವ ವಹಿಸಬಲ್ಲ ಸಾಮರ್ಥ್ಯ ಹೊಂದಿದೆ ಎಂಬುದನ್ನು ವಿಶ್ವದ ಬೇರೆ ದೇಶಗಳು ತಿಳಿದಿವೆ, ಇದಕ್ಕಾಗಿ ನಮ್ಮ ಶಾಲಾ ಮಕ್ಕಳಿಗೆ ಶಿಕ್ಷಣ ಹಂತದಲ್ಲೇ ಒಳ್ಳೆಯ ನಾಯಕತ್ವದ ಗುಣಲಕ್ಷಣಗಳನ್ನು ಹೇಳಿಕೊಡಬೇಕಾಗಿದೆ ಎಂದರು. ಶಾಲಾ ಪ್ರಾಂಶುಪಾಲ ಸೈಯದ್ ಅರೀಫ್ ಆರ್ ಅಧ್ಯಕ್ಷೀಯ ನುಡಿಗಳನ್ನಾಡಿ ಪಾರಂಪರಿಕ ಹಬ್ಬ ಹರಿದಿನಗಳಲ್ಲಿ ತೋರುವ ಆಸಕ್ತಿಯನ್ನು ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯೋತ್ಸವ ಗಣರಾಜ್ಯೋತ್ಸವಗಳಲ್ಲೂ ವಿದ್ಯಾರ್ಥಿಗಳು ತೋರಬೇಕು ಎಂದರು. ಶಾಲಾ ಆಡಳಿತ ಮಂಡಳಿಯ ಟಿ ಎಂ ಗಿರೀಶ್ ಹಾಗೂ ಅಧ್ಯಾಪಕ ವರ್ಗದ ಪ್ರೀತಾ ಟಿ ರೈ, ನೇತ್ರಾವತಿ ಎಸ್ಎಂ, ರೂಪ ಎಂ ಎಸ್ ಮುಂತಾದವರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ರಾಷ್ಟ್ರಭಕ್ತಿ ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯ ರೂಪಕಗಳನ್ನು ಆಕರ್ಷಕವಾಗಿ ಪ್ರಸ್ತುತಪಡಿಸಿದರು. ಮಹಾಲಕ್ಷ್ಮಿ ಬಿ, ಉಮ್ಮೇ ಸಲ್ಮಾ, ಶಾಂತಲಾ ಎನ್ ಪಿ ನಿರೂಪಿಸಿದರೆ ದೇಶಭಕ್ತಿ ಗೀತೆಯನ್ನು ಖುಶಿ ಮತ್ತು ತಂಡದವರು ಹಾಡಿದರು. ಶ್ರೈನ್ ಬ್ಯಾಸಿಲಿಕ ಸ್ವಾಗತ ಕೋರಿದರು. ಮುಖ್ಯ ಅತಿಥಿಗಳ ಪರಿಚಯವನ್ನು ಜಿ ಆರ್ ಉಷಾ ಮಾಡಿದರು. ತಸ್ಲಿಮಾ ನಝ್ನೀನ್ ವಂದನೆ ಸಮರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...