Monday, February 2, 2026
Monday, February 2, 2026

Apsara Ice Creams ಅಪ್ಸರಾ ಐಸ್ ಕ್ರೀಮ್ಸ್ ನಿಂದ ‘ಮುಸ್ಕಾನ್’ ಉಪಕ್ರಮದಿಂದ ವಿತರಣಾ ಚಟುವಟಿಕೆ

Date:

Apsara Ice Creams ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ ಉಪಕ್ರಮವನ್ನು ಪ್ರಾರಂಭಿಸುವುದಾಗಿ ತಿಳಿಸಿದೆ. ಐದು ದಶಕಗಳಿಗೂ ಹೆಚ್ಚು ಕಾಲ ಮಾರುಕಟ್ಟೆಯಲ್ಲಿ ಅಸ್ತಿತ್ವವನ್ನು ಹೊಂದಿರುವ ಸ್ಥಾಪಿತ ಮತ್ತು ವಿಶ್ವಾಸಾರ್ಹ ಬ್ರಾಂಡ್ ಅಪ್ಸರಾ ಐಸ್ ಕ್ರೀಮ್ಸ್, ಪ್ರಾರಂಭದಿಂದಲೂ ತಮ್ಮ ಗ್ರಾಹಕರಿಗೆ ಪ್ರೀಮಿಯಂ ಗುಣಮಟ್ಟದ ಐಸ್ಕ್ರೀಮ್ಗಳನ್ನು ಒದಗಿಸುತ್ತಾ ಬಂದಿದೆ. ಆಗಸ್ಟ್ 15ರಂದು ಮುಂಬೈ ಮತ್ತು ಪುಣೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ಇತರ ನಗರಗಳಲ್ಲಿ ಕೈಗೊಳ್ಳಲಾಗುವುದು.

ಮುಸ್ಕಾನ್ ಉಪಕ್ರಮದ ಅಡಿಯಲ್ಲಿ, ಕಂಪನಿಯು 53,000 (ಐಸ್ ಕ್ರೀಮ್) ಗಳನ್ನು ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಇದು ನಾಲ್ಕು ಟನ್ ಐಸ್ಕ್ರೀಮ್ಗಳಿಗೆ ಹತ್ತಿರದಲ್ಲಿದೆ. ಇನ್ನು ಎನ್ಜಿಒಗಳು ಮತ್ತು ಲಯನ್ಸ್ ಕ್ಲಬ್, ಲಿಯೋ, ಲಯನ್ ಇಂಟರ್ನ್ಯಾಷನಲ್ ಲ್ಯಾಂಡ್, ಸ್ವದೇಸ್ ಫೌಂಡೇಶನ್ನಂತಹ ಪ್ರಮುಖ ಸಾಮಾಜಿಕ ಸಂಸ್ಥೆಗಳು ಸಹ ಈ ಉಪಕ್ರಮದ ಭಾಗವಾಗಲಿವೆ. ಭಾರತದ 9 ರಾಜ್ಯಗಳು ಮತ್ತು 25 ನಗರಗಳನ್ನು ಒಳಗೊಳ್ಳುತ್ತದೆ. ಮಾತನಾಡಿದ ಅಪ್ಸರಾ ಐಸ್ ಕ್ರೀಮ್ಸ್ನ ಸ್ಥಾಪಕ ಪಾಲುದಾರ ನೆಮ್ ಚಂದ್ ಶಾ, “ಸಮಾಜದ ವಿವಿಧ ವರ್ಗಗಳ ಜನರ ಮುಖದಲ್ಲಿ ನಗು ತರುವುದು ಮತ್ತು ನಮ್ಮ 53ನೇ ವಾರ್ಷಿಕೋತ್ಸವ ಆಚರಿಸುವುದು ಮುಸ್ಕಾನ್ನ ಮುಖ್ಯ ಉದ್ದೇಶ .

ಆ. 15 ರಂದು 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಇದನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು.

Apsara Ice Creams ಅಪ್ಸರಾ ಐಸ್ಕ್ರೀಮ್ಸ್ನ ವ್ಯವಸ್ಥಾಪಕ ಪಾಲುದಾರ ಕೆಯೂರ್ ಶಾ ಮಾತನಾಡಿ, ಸಮಾಜದ ವಿವಿಧ ಸ್ತರಗಳನ್ನು ತಲುಪುವುದು ನಮ್ಮ ಆದ್ಯತೆಯಾಗಿದೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಾವು ನಮ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ ಎಂದರು. ನಮ್ಮ ಎಲ್ಲಾ ಫ್ರ್ಯಾಂಚೈಸ್ ಪಾಲುದಾರರು ಮತ್ತು ಸಂಸ್ಥೆಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಈ ಸಂದರ್ಭದಲ್ಲಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...