Friday, June 26, 2026
Friday, June 26, 2026

S.S. Mallikarjun ಭದ್ರಾ ಡ್ಯಾಂ ಭರ್ತಿ.ರೈತರಲ್ಲಿ ಹರ್ಷ. ತೋಟಗಾರಿಕಾ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲ- ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Date:

S.S. Mallikarjun ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ಹೇಳಿದರು.

ಅವರು ಇಂದು ಬಿ ಆರ್ ಪಿ ಯಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮವಾಗಿ ರೈತರಲ್ಲಿ ಆತಂಕದ ಛಾಯೆ ಮೂಡಿತ್ತು. ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕು ರೈತರ ನೆಮ್ಮದಿಯ ಬದಿಕಿಗೆ ಆಸಾರೆಯಾಗಲೆಂದು ಎಂದವರು ಆಶಿಸಿದರು.

S.S. Mallikarjun ಈ ಜಲಾಶಯದ ವ್ಯಾಪ್ತಿಗಳು ಕೊಡುವ ಅಚ್ಚು ಪಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ದಾವಣಗೆರೆ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ ಆಗಮಿಸಿದ್ದ ಅಧಿಕಾರಿಗಳು ganyaru ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...