Friday, June 26, 2026
Friday, June 26, 2026

Brahma Kumaris Institute ನಗರದ ಬ್ರಹ್ಮ ಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬ ಆಚರಣೆ

Date:

Brahma Kumaris Institute ಬ್ರಹ್ಮಾಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು. ರಕ್ಷಾಬಂಧನ ಸಂದರ್ಭದಲ್ಲಿ ನಾವೆಲ್ಲರೂ ಪರಸ್ಪರ ಸೋದರ-ಸೋದರಿಯರು ಎಂಬ ಪವಿತ್ರ ದೃಷ್ಟಿಯ ಸಂಕಲ್ಪವನ್ನು ಕೈಗೊಳ್ಳಲಾಯಿತು.
ಹಾಗೂ ಎಲ್ಲರಿಗೂ ಶ್ರೀರಕ್ಷೆಯೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಶ್ರೀ ಕೆ ಎಸ್ ಈಶ್ವರಪ್ಪನರು,ಮಾಜಿ ಉಪಮುಖ್ಯ ಮಂತ್ರಿಗಳು, ಶಿವಮೊಗ್ಗ ಇವರು ಮಾತನಾಡುತ್ತಾ“ ಇಡೀ ವಿಶ್ವವನ್ನೇ ಒಂದುಗೂಡಿಸುವ ಸಂಸ್ಥೆಯೆಂದರೆ ಅದು ಈಶ್ವರೀಯ ವಿಶ್ವ ವಿದ್ಯಾಲಯ , ಇಲ್ಲಿ ಯಾವುದೇ ಜಾತಿ-ಧರ್ಮದ ಭೇದ-ಭಾವವಿಲ್ಲ ಎಂದರು.

Brahma Kumaris Institute ಮುಂದುವರೆದು ಮಾತನಾಡುತ್ತಾ ಪ್ರಸ್ತುತ ರಾಖಿಯ ಪಾವಿತ್ರತೆಯು ಜಗತ್ತಿನ ಮೃಗೀಯ ಮನಸ್ಕರಿಗೆ ಬೇಕಾಗಿದೆ. ನಾವು ಪರಸ್ಪರ ಅಣ್ಣ-ತಂಗಿಯರು,ಅಕ್ಕ-ತಮ್ಮಂದಿರು ಎಂಬ ಭಾವನೆಯಿಂದ ಸೋದರಿಯರ ರಕ್ಷಣೆಯಾಗಬೇಕು.ಅನಾಚರ-ಅತ್ಯಾಚಾರಗಳು ನಿಲ್ಲಬೇಕು “ ಎಂದು ರಾಖಿಯ ಮಹತ್ವವನ್ನು ತಿಳಿಸಿದರು. ನಂತರ ಶ್ರೀ ಈಶ್ವರಪ್ಪ ಹಾಗೂ ಶ್ರೀ ಕೆ ಈ ಕಾಂತೇಶ್ ಇವರಿಗೆ ಬ್ರಹ್ಮಾಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ಬಿಕೆ ಅನಸೂಯಕ್ಕನವರು ರಾಖಿ ಕಟ್ಟಿ ಸನ್ಮಾನಿಸಿದರು. ಬಿಕೆ ಶಿವದೇವಿ , ಬಿಕೆ ನಾಗರಾಜ್ ,ಬಿಕೆ ಮಂಜಪ್ಪ ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

[2] ಮಾನ್ಯ ಶ್ರೀ ಚೆನ್ನಬಸಪ್ಪ , ಶಾಸಕರು,ಶಿವಮೊಗ್ಗ ಹಾಗೂ ಮಾನ್ಯ ಶ್ರೀ ಡಿ ಎಸ್ ಅರುಣ್ , ವಿಧಾನ ಪರಿಷತ್ ಸದಸ್ಯರು, ಶಿವಮೊಗ್ಗ -ಇವರಿಗೆ ಬ್ರಹ್ಮಾಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ಬಿಕೆ ಅನಸೂಯಕ್ಕನವರು ರಕ್ಷಾಬಂಧನ ಕಟ್ಟಿ ಶುಭಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...