Sunday, August 2, 2026
Sunday, August 2, 2026

Kimmane Ratnakar ರಾಜ್ಯಪಾಲರು ಅನಗತ್ಯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ- ಕಿಮ್ಮನೆ ರತ್ನಾಕರ್

Date:

Kimmane Ratnakar ಈ ದೇಶವು ಪ್ರಜಾಪ್ರಭತ್ವ ಮತ್ತು ಸಂವಿಧಾನದ ಅಡಿಯಲ್ಲಿ ನಿರ್ಮಾಣವಾಗಿದ್ದು, ರಾಜ್ಯಪಾಲರು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಈ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ನಂತರ ತಾಲೂಕು ಕಚೇರಿ ಎದುರು ಮಾತನಾಡಿ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿ ರಾಜ್ಯಪಾಲರು ಅನಗತ್ಯವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದರು.
ಈ ಪ್ರಕರಣ ರಾಜಕೀಯ ಒಳಗೊಂಡಂತೆ ಕಾಣುತ್ತಿದೆ. ಭಾರತದ ಸ್ವಾತಂತ್ರ್ಯ ದಿನದ ಮರು ದಿನವೇ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದು ಒಂದು ಷಡ್ಯಂತ್ರದ ಭಾಗವಾಗಿದ್ದು, ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ.

Kimmane Ratnakar ಹಾಗಾಗಿ ರಾಷ್ಟ್ರಪತಿ ತತ್‌ಕ್ಷಣದಲ್ಲಿ ಮಧ್ಯಸ್ಥಿಕೆ ವಹಿಸಿ ಕರ್ನಾಟಕದ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯುವಂತೆ ತಿಳಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಕೆಸ್ತೂರ್ ಮಂಜುನಾಥ್, ಡಿ.ಎಸ್.ವಿ.ಶೆಟ್ಟಿ, ಅಮರನಾಥ್ ಶೆಟ್ಟಿ, ಟಿ.ಎಲ್.ಸುಂದರೇಶ್, ರೆಹಮತ್ ಆಜಾದಿ, ಉದಯ್ ಕುಮಾರ್, ಪ.ಪಂ.ಸದಸ್ಯರಾದ ಗೀತಾ ರಮೇಶ್, ಸುಶೀಲಾ ಶೆಟ್ಟಿ, ಮಂಜುಳಾ ನಾಗೇಂದ್ರ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...