Sunday, August 2, 2026
Sunday, August 2, 2026

Legal Services Authority ತಂಬಾಕು ದುಷ್ಪರಿಣಾಮ ಜಾಗೃತಿ ಬಗ್ಗೆ ಒಂದುದಿನದ ಕಾರ್ಯಾಗಾರ

Date:

Legal Services Authority ದಿನಾಂಕ 19.8.2024ರಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಕುರಿತಂತೆ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ತರಬೇತಿ ಕೇಂದ್ರ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಂತೋಷ್ ಎಂ ಎಸ್ ಗೌರವಾನ್ವಿತ ಹಿರಿಯ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಇವರು ನೆರವೇರಿಸಿದರು. ಭರತ್ ಕುಮಾರ್ ಪೊಲೀಸ್ ಇನ್ಸ್ಪೆಕ್ಟರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Legal Services Authority ಡಾ. ನಟರಾಜ್ ಕೆ ಎಸ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಮಲ್ಲಪ್ಪ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇವರು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಹೇಮಂತ್ ರಾಜ್ ಅರಸ್ ಜಿಲ್ಲಾ ಸಲಹೆಗಾರರು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇವರು ಕೋಟ್ಪ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಶಿವಕುಮಾರ್ ಟಿ ಎಸ್ ಆಪ್ತ ಸಮಾಲೋಚಕರು ತಂಬಾಕು ವ್ಯಸನ ಮುಕ್ತಿ ಕೇಂದ್ರ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ, ಇವರು ತಂಬಾಕು ವ್ಯಸನ ಮುಕ್ತಿ ಕೇಂದ್ರದ ಸೇವೆಗಳ ಕುರಿತು ಮಾಹಿತಿ ನೀಡಿದರು. ರವಿರಾಜ್ ಜಿ ಕೆ ಸಮಾಜ ಕಾರ್ಯಕರ್ತರು ಇವರು ನಿರೂಪಣೆ ಮಾಡಿದರು. ಡಿ ಇ ಓ ಪ್ರವೀಣ್, ಕುವೆಂಪು ವಿಶ್ವವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...