Monday, February 2, 2026
Monday, February 2, 2026

Kuvempu University ಭುವನೇಶ್ವರದಲ್ಲಿ ನಡೆಯುವ ಎನ್ಎಸ್ಎಸ್ ಯುವ ನಾಯಕತ್ವ ಶಿಬಿರಕ್ಕೆ ರಾಜ್ಯದ 17 ಸ್ವಯಂ ಸೇವಕರ ಆಯ್ಕೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯು ಆಗಸ್ಟ್ 28 ರಿಂದ 31 ರ ವರೆಗೆ ಒರಿಸ್ಸಾ ರಾಜ್ಯದ ಭುವನೇಶ್ವರ್ ನಲ್ಲಿ ನಡೆಯುವ ರಾಷ್ಟ್ರೀಯ ಯುವ ನಾಯಕತ್ವ ಶಿಬಿರದಲ್ಲಿ ಭಾಗವಹಿಸುವ ಮೂಲಕ ಶಿಬಿರದಲ್ಲಿ ಸಹಭಾಗಿಯಾಗುವ ಅವಕಾಶ ಪಡೆದಿದೆ. ಒರಿಸ್ಸಾ ಸರ್ಕಾರ, ಯುವ ಸಬಲೀಕರಣ ಇಲಾಖೆ ಭಾರತ ಸರಕಾರ ಹಾಗೂ ಪ್ರಾಜೆಕ್ಟ್ ಪಾಯಿಂಟ್ ಸಂಸ್ಥೆಯು ಜಂಟಿಯಾಗಿ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಒಟ್ಟು 18 ರಾಜ್ಯಗಳು 21 ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದಿಂದ 17 ಸ್ವಯಂಸೇವಕರು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಯುವ ನೀತಿಯ ಮೇಲೆ ವಿಶೇಷ ಚರ್ಚೆ ಸಂವಾದ ನಡೆಸಲು ದೇಶದ ವಿವಿಧ ಭಾಗಗಳಿಂದ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು ಕುವೆಂಪು Kuvempu University ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ‘ಜೆಂಡರ್ ಜಸ್ಟಿಸ್’ ಮೇಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಾರ್ಯಕ್ರಮಾಧಿಕಾರಿಗಳಾದ ಡಾ. ಹಾ. ಮಾ. ನಾಗಾರ್ಜುನ ಹಾಗೂ ಇತರ ಹಿರಿಯ ಎನ್ ಎಸ್ ಎಸ್ ಸ್ವಯಂ ಸೇವಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಯುವ ಯೋಜನೆಯ ಕರ್ನಾಟಕ ರಾಜ್ಯ ಸಂಯೋಜಕರಾದ ಡಾ. ವಿ. ಪ್ರಶಾಂತ್ ಹಾಗೂ ಆಯೋಜಕರಾದ ಡಾ. ಸಂಗ್ರಾಮ್ ಕೇಸರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಎನ್ ಎಸ್ ಎಸ್ ನ ಈ ವಿಸ್ತರಣಾ ಚಟುವಟಿಕೆಗಾಗಿ ಮಾನ್ಯ ಕುಲಪತಿಗಳಾದ ಡಾ. ಶರತ್ ಅನಂತಮೂರ್ತಿ, ಕುಲಸಚಿವರಾದ ಶ್ರೀ ಎ. ಎಲ್.ಮಂಜುನಾಥ್ ಹಾಗೂ ಇತರ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...