Thursday, September 17, 2026
Thursday, September 17, 2026

CM Siddharamaih ರಾಜ್ಯಪಾಲರು ತಮ್ಮ ಕ್ರಮದಲ್ಲಿ ತಾರತಮ್ಯ ಮಾಡಿದ್ದಾರೆ- ಸಿಎಂ ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದಾರೆ. ರಾಜ್ಯಪಾಲರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಮೇಲಿನ ತನಿಖೆಗಾಗಿ ರಾಜ್ಯಪಾಲರ ಬಳಿ ಲೋಕಾಯುಕ್ತದವರು ಮನವಿ ಮಾಡಿದ್ದಾರೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ಲೋಕಾಯುಕ್ತದವರು ಮತ್ತೊಮ್ಮೆ ಕೋರಿದ್ದಾರೆ. ಆದರೆ 26-07-2024 ರಂದು ಅಬ್ರಾಹಂರವರು ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇಂತಹ ತಾರತಮ್ಯವೇಕೆ?

CM Siddharamaih ಶ್ರೀಮತಿ ಶಶಿಕಲಾ ಜೊಲ್ಲೆ, ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿನವರ ಮೇಲೆ ಆರೋಪಗಳಿದ್ದು, ಇದುವರೆಗೆ ತನಿಖೆಗೆ ಆದೇಶಿಸಿರುವುದಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದ್ದು, ಅವರ ಮೇಲೆ ಗೌರವವಿದೆ. ಆದರೆ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸಬಾರದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...