Saturday, May 16, 2026
Saturday, May 16, 2026

Kim Star Udupi ಡಾ.ರಕ್ಷಾರಾವ್, ಜಿ.ವಿಜಯಕುಮಾರ್ ಮುಂತಾದವರು ರಾಜರತ್ನ ಪ್ರಶಸ್ತಿ ಘೋಷಣೆ

Date:

Kim Star Udupi ಕಿಮ್ ಸ್ಟಾರ್ ಉಡುಪಿ ವತಿಯಿಂದ ಆ. 25ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಬೆಂಗಳೂರು ಚಿತ್ರೋತ್ಸವ, ಸಿನಿಮಾ ಹಾಗೂ ಕಿರುಚಿತ್ರಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಮೊಗ್ಗದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವೈದ್ಯೆ ಡಾ. ರಕ್ಷಾ ರಾವ್, ಉದ್ಯಮಿ ಎ.ಆರ್.ಅವಿನಾಶ್, ವಿದ್ಯಾ, ಉಮಾ ದಿಲೀಪ್, ಪುನೀತ್ ಬೆಳ್ಳೂರು, ಪೂರ್ಣಿಮಾ, ಅಮೃತಾ ಹಾಗೂ ವಿಷ್ಣುಪ್ರಸಾದ್ ಅವರಿಗೆ ರಾಜರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಗುತ್ತಿದೆ.
Kim Star Udupi ಬೆಂಗಳೂರಿನ ಮೂಡಲಪಾಳ್ಯ ಕಲ್ಯಾಣ ನಗರದಲ್ಲಿರುವ ಜ್ಞಾನ ಸೌಧದಲ್ಲಿ ಆ. 25ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಧಕರು ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದಿಸಲಾಗುತ್ತಿದೆ. ಅತ್ಯುತ್ತಮ ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಚಿತ್ರಗೀತೆಗಳ ಸಮ್ಮಿಲನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕಿಮ್ ಸ್ಟಾರ್ ಉಡುಪಿ ಮುಖ್ಯಸ್ಥ ಕೆ.ಜಯಶೀಲ್ ತಿಳಿಸಿದ್ದಾರೆ.
ವಿಜಯನಗರ ವಿಧಾನಸಭಾ ಕ್ಷೇತ್ರ ಶಾಸಕ ಎಂ.ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು. ಗೋವಿಂದರಾಜಪುರ ಶಾಸಕ ಎಂ.ಪ್ರಿಯಕೃಷ್ಣ ಉದ್ಘಾಟಿಸುವರು. ಚಲನಚಿತ್ರ ಮಂಡಳಿ ಸದಸ್ಯ ಚಿಕ್ಕಣ್ಣ, ಬಿಬಿಎಂಪಿ ಸದಸ್ಯೆ ತಾರಾ ಲೋಕೇಶ್, ನಟಿ ಗೀತಾ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...