Tuesday, December 16, 2025
Tuesday, December 16, 2025

Kolkata Doctor Case ಕೊಲ್ಕೊತಾ ವಿದ್ಯಾರ್ಥಿನಿ ಹತ್ಯೆ: ಸಾಗರದಲ್ಲಿ ಎಬಿವಿಪಿ ಪ್ರತಿಭಟನೆ

Date:

Kolkata Doctor Case ಕೋಲ್ಕತ್ತದ ಆರ್. ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯುವ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಜೊತೆಯಲ್ಲಿಯೇ ಸಾಗರ ದಲ್ಲಿಯೂ ವೈದ್ಯಕೀಯ ಪ್ಯಾರಮೆಡಿಕಲ್ ವಿದ್ಯಾರ್ಥಿ ಸಮೂಹ ಎಬಿವಿಪಿ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಿದರು.

ಸಾಗರ ನಗರಸಭೆ ಪಕ್ಕದ ಗಾಂಧಿ ಮೈದಾನದಿಂದ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆ ಮತ್ತು ಜ್ಞಾನಸಾಗರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ಆರಂಬಿಸಿ ಸಾಗರದ ಹೃದಯ ಭಾಗ ಸಾಗರ್ ಹೊಟೇಲ್ ವೃತ್ತದಲ್ಲಿ ವಿದ್ಯಾರ್ಥಿ ಸಮೂಹ ಭಾರತ ನಕ್ಷೆಯ ಮಾದರಿಯಲ್ಲಿ ಸಾಲು ನಿಲ್ಲುವ ಮೂಲಕ ಪ್ರತಿಭಟನೆಯ ಮೂಲಕ ದೇಶದ ಗಮನ ಸೆಳೆಯುತ್ತಿದ್ದೇವೆ ಎಂಬ ಸಂದೇಶ ಮುಟ್ಟಿಸುವಂತಿತ್ತು.
ಯುವ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ಧ ಮಾತ್ರವಲ್ಲದೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಆಡಳಿತದತ್ತ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

Kolkata Doctor Case ಯುವ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕೇವಲ ವೈದ್ಯಕೀಯ ಸಮೂಹ ಬೆಚ್ಚಿ ಬೀಳುವಂತೆ ಮಾಡಿಲ್ಲ, ಬದ ಲಾಗಿ ದೇಶವೇ ಹೋರಾಟಕ್ಕೆ ಒಂದಾಗುವಂತೆ ಮಾಡಿದೆ, ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪೊಲೀಸರು ಪ್ರಕರಣ ವನ್ನು ನಿರ್ವಹಿಸಿದ ರೀತಿಯೇ ಟೀಕೆಗೆ ಕಾರಣವಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...