Thursday, March 19, 2026
Thursday, March 19, 2026

Rotary Club Shivamogga ಶಾಲಾಮಕ್ಕಳಿಗೆ ಪೋಕ್ಸೋ‌ ಕಾಯಿದೆ ಅರಿವು ಅತ್ಯವಶ್ಯ-ಬಸವರಾಜ್

Date:

Rotary Club Shivamogga ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಪೋಷಕರಿಗೆ ಲೈಂಗಿಕ ದೌರ್ಜನ್ಯದಿಂದ ಸಂರಕ್ಷಣೆ ಪಡೆಯುವ ಕಾಯಿದೆ ೨೦೧೨ (ಪೋಕ್ಸೋ) ಹಾಗೂ ಬಾಲ್ಯ ವಿವಾಹ ನಿಷೇದ ಕಾಯಿದೆ ೨೦೦೬ ಇವುಗಳ ಕುರಿತು ಅರಿವು ಮೂಡಿಸುವುದು ಶಾಲಾ ಆಡಳಿತ ಮಂಡಳಿಗಳ ಹಾಗೂ ಶಿಕ್ಷಕರ ಜವಾಬ್ದಾರಿಯೆಂದು ನಗರದ ಪ್ರಸಿದ್ಧ ವಕೀಲರು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು ಆದ ಶ್ರೀ ಬಸವರಾಜ್ ಅವರು ಅಭಿಪ್ರಾಯ ಪಟ್ಟರು.
ಅವರು ಇಂದು ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ಮಕ್ಕಳಿಗೆ ಪೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕಾಯಿದೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಶ್ರೀಯುತರು ತಮ್ಮ ಮಾತನ್ನು ಮುಂದುವರೆಸಿ ಮಕ್ಕಳಿಗೆ ಅದರಲ್ಲೂ ಹದಿಹರೆಯದ ಮಕ್ಕಳಿಗೆ ಮತ್ತು ಪೋಷಕರಿಗೆ ತಮ್ಮ ಬಂಧುಗಳು ಅಥವಾ ಶಿಕ್ಷಕರು ತಮ್ಮ ಮೈಯನ್ನು ಮುಟ್ಟುವಾಗ ಬ್ಯಾಡ್ ಟಚ್ ಮತ್ತು ಗುಡ್ ಟಚ್ ಮೂಲಕ ಮುಟ್ಟುತ್ತಾರೆಯೇ ಎಂಬುದರ ವ್ಯತ್ಯಾಸವನ್ನು ತಿಳಿದುಕೊಂಡಿರುವುದು ಬಹಳ ಮುಖ್ಯ. ತಮ್ಮ ತಂದೆ-ತಾಯಿ ಅಥವಾ ಸ್ವಂತ ಸಹೋದರ ಸಹೋದರಿಯರ ಹೊರತಾಗಿ ಇತರರ ಜೊತೆಗೆ ವ್ಯವಹರಿಸುವಾಗ ಈ ಪರಿಜ್ಞಾನವನ್ನು ಹೊಂದಿರಬೇಕೆAದು ತಿಳಿಸಿದರು. ಈ ಬಗ್ಗೆ ಸೂಕ್ತ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಪ್ರದರ್ಶಿಸುವುದರ ಮೂಲಕ ಮಕ್ಕಳಿಗೆ ಹಾಗೂ ಪೋಷಕರಿಗೆ ಈ ಅಂಶಗಳನ್ನು ಮನದಟ್ಟು ಮಾಡಿದರು. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಕಡಿಮೆಯಾಗುತ್ತಿದ್ದರೂ, ಕೆಲವು ಪ್ರದೇಶಗಳ ಹಾಗೂ ಕೆಲವು ತೀರಾ ಹಿಂದುಳಿದ ವರ್ಗಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಜೀವಂತ ಇರುವುದು ಅತ್ಯಂತ ದುರದೃಷ್ಟಕರ ಸಂಗತಿ ಎನ್ನುತ್ತ ಹೆಣ್ಣು ಮಕ್ಕಳು ೧೮ವರ್ಷಕ್ಕಿಂತ ಮುಂಚೆ & ಗಂಡು ಮಕ್ಕಳು ೨೧ ವರ್ಷಕ್ಕಿಂತ ಮುಂಚೆ ವಿವಾಹ ಮಾಡುವುದು ಅವರ ಆರೋಗ್ಯ ಹಾಗೂ ಕಾನೂನು ದೃಷ್ಟಿಯಿಂದ ಸೂಕ್ತವಲ್ಲ ಎಂದು ಕಿವಿ ಮಾತು ಹೇಳಿದರು.
Rotary Club Shivamogga ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ರೊ. ಅರುಣ್ ದೀಕ್ಷಿತ್‌ರವರು ದೀಪ ಬೆಳಗಿಸುವುದರ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಟ್ರಸ್ಟ್ನ ಉಪಾಧ್ಯಕ್ಷರಾದ ರೊ. ಡಾ|| ಪರಮೇಶ್ವರ್ ಡಿ. ಶಿಗ್ಗಾಂವ್ ಇವರು ಪೋಕ್ಸೋ ಕಾಯಿದೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಮಕ್ಕಳ ಲೈಂಗಿಕ ಶೋಷಣೆಯನ್ನು ತಡೆಗಟ್ಟಲು ಅವರಿಗೆ ಈ ಕಾಯಿದೆಯ ಅರಿವಿನ ಮಹತ್ವ ಎಷ್ಟರ ಮಟ್ಟಿಗೆ ಅವಶ್ಯಕ ಎಂಬುದನ್ನು ತಿಳಿಸುತ್ತಾ, ಶಾಲೆಯಲ್ಲಿ ಈ ಸಂಬಂಧದ ದೂರುಗಳನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಲಾಗುವುದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ (ರಿ.,)ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ನಿವೃತ್ತ ಡಿ.ಪಿ.ಐ. ಆದ ಶ್ರೀ ಚಂದ್ರಶೇಖರಯ್ಯ ಎಂ., ಇವರು ತಾವು ಶಿಕ್ಷಣ ಇಲಾಖೆಯ ವಿವಿಧ ಹಂತದಲ್ಲಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿವರಿಸುತ್ತಾ, ಮಕ್ಕಳು ಈ ಬಗ್ಗೆ ಎಚ್ಚರದಿಂದ ಇರುವುದು ಅವರ ಉಜ್ವಲ ಭವಿಷ್ಯದ ದೃಷ್ಟಿಯಿಂದ ಅತೀ ಅವಶ್ಯಕ ಎಂದರು. ಹಾಗೆಯೇ ಶಿಕ್ಷಕರು ಈ ಸಂಬAಧ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದರು.
ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್, ಟ್ರಸ್ಟ್ನ ಖಜಾಂಚಿ ರೊ. ಜಿ. ವಿಜಯ್ ಕುಮಾರ್ ಹಾಗೂ ಪ್ರಾಂಶುಪಾಲರಾದ ಸೂರ್ಯನಾರಾಯಣನ್ ಆರ್., ಇವರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...