Thursday, March 19, 2026
Thursday, March 19, 2026

Online Scam ಆನ್ ಲೈನ್ ಹಣ ದ್ವಿಗುಣ ಆಮಿಷಕ್ಕೆ ಸೋತ ಯುವಕನ ಆತ್ಮಹತ್ಯೆ

Date:

Online Scam ಆನ್ಲೈನ್ ಆಯಪ್ ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಭದ್ರಾವತಿ ನಗರದ ಪೇಪರ್ ಟೌನ್ ಬಡಾವಣೆಯ ಆರನೇ ವಾರ್ಡ್ನಲ್ಲಿ ನಡೆದಿದೆ. ಪ್ರದೀಪ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್ ಲೈನ್ನಲ್ಲಿ ಒನ್ ಟು ಡಬಲ್ ಹಣ ಆಗುತ್ತದೆ ಎಂದು ನಂಬಿ 91 ಸಾವಿರ ರೂಪಾಯಿ ಸಾಲ ಮಾಡಿ ಹಣ ತೊಡಗಿಸಿ ಮೋಸ ಹೋಗಿದ್ದ. ಹಣ ಪಾವಸ್ ಬಾರದ ಹಿನ್ನಲೆಯಲ್ಲಿ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಇನ್ನು ಇತ ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಶಾಹಿ ಎಕ್ಸ್ಪೋರ್ಟ್ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ. ಆನ್ ಲೈನ್ ಆಯಪ್ಗಳನ್ನು ನಂಬಿ ಮೋಸ ಹೋಗಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆಯಷ್ಟೇ ಭದ್ರಾವತಿಯ ಪೇಪರ್ ಟೌನ್ ಬಡಾವಣೆಯ ಸ್ಟಿವನ್ (24) ಎಂಬಾತ ಮೀಟರ್ ಬಡ್ಡಿ ಟಾರ್ಚರ್ ತಾಳಲಾರದೇ Online Scam ಆತ್ಮಹತ್ಯೆ ಮಾಡಿಕೊಂಡಿದ್ದ. ಮೃತನ ತಂದೆ ಮಾಡಿದ್ದ ಸಾಲಕ್ಕೆ ಹಣ ಪಡೆದು, ಬಳಿಕ ಮೀಟರ್ ಬಡ್ಡಿ ಕಟ್ಟಲು ಆಗದೇ ಪರದಾಡುತ್ತಿದ್ದರು. ಇದೇ ಮೀಟರ್ ಬಡ್ಡಿ ಟಾರ್ಚರ್ಗೆ ಸ್ಟಿವನ್ ನೇಣಿಗೆ ಶರಣಾಗಿದ್ದ. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಯುವಕ ಆನ್ಲೈನ್ ಆಯಪ್ ನಂಬಿ ಹಣ ಕಳೆದುಕೊಂಡು ಸಾವನ್ನಪ್ಪಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...