Monday, February 2, 2026
Monday, February 2, 2026

Nagabhushana shivacharya swamiji ಅವಿಭಕ್ತ ಕುಟುಂಬಕ್ಕಾಗಿ ಶ್ರಮಿಸಿದ ದಾಂಪತ್ಯ ಜೀವನ ಎಲ್ಲರಿಗೂ ಮಾದರಿ- ಶ್ರೀಗುರು ನಾಗಭೂಷಣ ಶಿವಾಚಾರ್ಯಶ್ರೀ

Date:

Nagabhushana shivacharya swamiji ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಜೀವನ ನಡೆಸುವುದು ಅತ್ಯಂತ ಅವಶ್ಯಕ. ಉತ್ತಮ ಹೊಂದಾಣಿಕೆಯಿಂದ ಸುದೀರ್ಘ ದಾಂಪತ್ಯ ಜೀವನ ಸಾಧ್ಯ ಎಂದು ಮಳಲಿ ಮಠದ ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ರಿಪ್ಪನ್ಪೇಟೆ ಸಮೀಪದ ದೂನ ಗ್ರಾಮದಲ್ಲಿ ಆಯೋಜಿಸಿದ್ದ ಚನ್ನವೀರಪ್ಪ ಗೌಡ್ರು ಹಾಗೂ ವಿಶಾಲಕ್ಷಮ್ಮ ದಂಪತಿಯ 60ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸ್ವಾರ್ಥವೇ ಎಲ್ಲೆಡೆ ಕಾಣುತ್ತೇವೆ. ಅವಿಭಕ್ತ ಕುಟುಂಬಕ್ಕಾಗಿ ಶ್ರಮಿಸಿ ಹೊಂದಾಣಿಕೆಯ ದಾಂಪತ್ಯ ಜೀವನ ನಡೆಸುವುದು ಎಲ್ಲರಿಗೂ ಮಾದರಿ ಎಂದು ತಿಳಿಸಿದರು.
ಸಮಾಜದ ಪ್ರತಿಯೊಬ್ಬರು ಉತ್ತಮ ಜೀವನಶೈಲಿ ರೂಪಿಸಿಕೊಳ್ಳಲು ಗುರುಹಿರಿಯರ ಮಾರ್ಗದರ್ಶನ ಪಡೆಯಬೇಕು. ಒಳ್ಳೆಯ ಆಲೋಚನೆಗಳು ಹಾಗು ಮತ್ತೊಬ್ಬರಿಕೆ ಉಪಕಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಮನೆಗಳಲ್ಲಿ ಪಾಲಕರು ಸಂಸ್ಕಾರ ಮನೋಭಾವ ಬೆಳೆಸಬೇಕು ಎಂದು ಸಲಹೆ ನೀಡಿದರು.
Nagabhushana shivacharya swamiji ಪ್ರಗತಿಪರ ರೈತ ಚನ್ನವೀರಪ್ಪ ಗೌಡ್ರು, ಸಹೋದರರಾದ ಶಿವನಂದಪ್ಪ ಗೌಡ್ರು ಮತ್ತು ಗಂಗಾಧರಪ್ಪ ಗೌಡ್ರು ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಕಷ್ಟಪಟ್ಟು ಬೆಳೆದಿದ್ದಾರೆ ಎಂದರು.
ವಕೀಲ ದಿನೇಶ್ ಮಣಿಕೆರೆ, ಗಂಗಾಧರಪ್ಪ ಕಳಸೆ, ಮಧುಸೂದನ್ ಡಿ.ಯು, ಸುಗಂಧರಾಜ ಇತರರು ಮಾತನಾಡಿದರು. ಅಶ್ವಿನಿ ವಿನಾಯಕ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ಯುಕ್ತ ಸ್ವಾಗತಿಸಿದರು. ರೂಪಾ ವಂದನಾರ್ಪಣೆ ಮಾಡಿದರು. ಉಮೇಶ್, ಭಾಗ್ಯಾ, ಯಶ್ವಿನ್ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...