Monday, February 2, 2026
Monday, February 2, 2026

Shimoga News ಸೆ.1 ರಂದು ರಾಜ್ಯಮಟ್ಟದ 34 ನೇ ಸಂಸ್ಕೃತ ಭಾಷಣ ಸ್ಪರ್ಧೆ

Date:

Shimoga News ಶಿವಮೊಗ್ಗ ನಗರದ ಸಂಸ್ಕೃತ ಭಾರತೀ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ವತಿಯಿಂದ ಸಂಸ್ಕೃತೋತ್ಸವದ ಪ್ರಯುಕ್ತ ದಿನಾಂಕ: ೦೧.೦೯.೨೦೨೪ ರ ಭಾನುವಾರ ಬೆಳಿಗ್ಗೆ ೯.೩೦ಕ್ಕೆ ಸಂಸ್ಕೃತ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ದೇವತಾತ್ಮ ಹಿಮಾಲಯ-ಭಾರತಾತ್ಮ ಸಂಸ್ಕೃತಮ್ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯ ಮಟ್ಟದ “೩೪ ನೇ ಸಂಸ್ಕೃತ ಭಾಷಣ ಸ್ಪರ್ಧೆ” ಯನ್ನು ಶಿವಮೊಗ್ಗ ನಗರದ ಸಂಸ್ಕೃತ ಭವನದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ವಿವಿದ ಪಾಠಶಾಲಾಗಳಿಂದ ೨೫ ಜನ ಸ್ಪರ್ಧಿಗಳು ಭಾಗವಹಿಸಿ ಸಂಸ್ಕೃತದಲ್ಲಿ ಭಾಷಣ ಮಾಡಲಿದ್ದಾರೆ. ಆಸಕ್ತ ಸಂಸ್ಕೃತ ವಿದ್ಯಾರ್ಥಿಗಳು, ನಾಗರೀಕರು, ಸಂಸ್ಕೃತ ಉಪನ್ಯಾಸಕರು, ಪಂಡಿತರು ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ತಿಳಿಸಿದ್ದಾರೆ.
ಸಂಜೆ ೪.೩೦ ಕ್ಕೆ ಸಮಾರೋಪ ಸಮಾರಂಭ:
Shimoga News ಸಂಸ್ಕೃತ ಬಾರತೀ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಒಂದು ತಿಂಗಳುಕಾಲ ನಡೆಸುತ್ತಿರುವ ಸಂಸ್ಕೃತ ಉತ್ಸವದ ಸಮಾರೋಪ ಸಮಾರಂಭವು ದಿನಾಂಕ ೦೧.೦೯.೨೪ ರ ಸಂಜೆ ೪.೩೦ ಕ್ಕೆ ಭಾನುವಾರ ಶಿವಮೊಗ್ಗ ನಗರದ ಬಿ.ಬಿ.ರಸ್ತೆಯಲ್ಲಿರುವ ಸಂಸ್ಕೃತ ಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಪಿ.ಯು.ಸಿ. ಮತ್ತು ಹತ್ತನೇ ತರಗತಿಯಲ್ಲಿ ಸಂಸ್ಕೃತದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು, ನಾಗರೀಕರು, ಸಂಸ್ಕೃತ ಉಪನ್ಯಾಸಕರು, ಪಂಡಿತರು ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...