Monday, September 21, 2026
Monday, September 21, 2026

Yatnal News ಶಾಸಕ ಯತ್ನಾಳ್ ವಿರುದ್ಧ ಮಾನನಷ್ಷ ದಾವೆ ದಾಖಲಿಸಲು ಅನುಮತಿ

Date:

Yatnal News ಬೆಂಗಳೂರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ (ತಬಸ್ಸುಮ್ ದಿನೇಶ್ ರಾವ್) ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ದೇಶಿಸಿದೆ ಎಂದು ವರದಿಯಾಗಿದೆ.
ಲೋಕಸಭೆ ಚುನಾವಣೆಯ ಸಂದರ್ಭ ಏಪ್ರಿಲ್ 4ರಂದು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತ್ನಾಳ್ “ಹೆಚ್ಚು ಕಡಿಮೆ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶದ ವಿರುದ್ದ ಹೇಳಿಕೆ ಕೊಡುವುದು ಗುಂಡೂರಾವ್‌ಗೆ ಚಟ ಆಗಿಬಿಟ್ಟಿದೆ” ಎಂದಿದ್ದರು.
Yatnal News ಯತ್ನಾಳ್ ಹೇಳಿಕೆಯ ವಿರುದ್ದ ತಬು ರಾವ್ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಪತ್ರಿಕಾ ವರದಿಗಳು ಸೇರಿದಂತೆ ಹಲವು ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಅದನ್ನು ಪರಿಗಣಿಸಿದ ನ್ಯಾಯಾಲಯ ಯತ್ನಾಳ್‌ಗೆ ಸಮನ್ಸ್ ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ಯತ್ನಾಳ್ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿ ಪ್ರಕರಣ ದಾಖಲಿಸಲು ತಬು ರಾವ್ ಕೋರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...