Friday, March 20, 2026
Friday, March 20, 2026

Rotary Club Shivamogga ಪಿಎಂಇಜಿಪಿ ಯೋಜನೆಯ ಲಾಭವನ್ನ ಸಮಾಜದ ಎಲ್ಲ ವರ್ಗದವರೂ ಪಡೆಯಬಹುದು- ಸುರೇಶ್

Date:

Rotary Club Shivamogga ಶಿವಮೊಗ್ಗ ನಗರದ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಾಣಿಜ್ಯ ಹಾಗೂ ಕೈಗಾರಿಕೆಗಳ ಇಲಾಖೆಯ ಉಪನಿರ್ದೇಶಕ ಸುರೇಶ್ ಮಾತನಾಡಿ, ಸಣ್ಣ ಕೈಗಾರಿಕೆ ಹಾಗೂ ಉದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಸರ್ಕಾರವು 2008 ರಲ್ಲಿ ಜಾರಿಗೊಳಿಸಿದ ಯೋಜನೆಯಾದ ಪಿಎಂಈಜಿಪಿ (ಪ್ರೇಮ್ ಮಿನಿಸ್ಟರ್ಸ್ ಎಂಪ್ಲಾಯ್ ಮೆಂಟ್ ಜನರೇಶನ್ ಪ್ರೋಗ್ರಾಂ) ಕುರಿತಾದ ವಿಸ್ತೃತ ಮಾಹಿತಿ ನೀಡಿದರು.

ಈ ಯೋಜನೆಯ ಫಲಾನುಭವಿಗಳಾಗಲು ಅನುಸರಿಸಬೇಕಾದ ನಿಯಮಗಳು, ಕಾರ್ಯ ಯೋಜನೆ, ಬ್ಯಾಂಕ್ ಗಳ ಪಾತ್ರ, ಇಲಾಖೆಯ ಜವಾಬ್ದಾರಿಗಳ ಕುರಿತಾಗಿ ಸವಿವರವಾದ ಮಾಹಿತಿಯನ್ನು ಹಂಚಿಕೊಂಡ ಅವರು, ಈ ಯೋಜನೆಯು ಸಾಲಾಧಾರಿತ ಸಬ್ಸಿಡಿ ಯೋಜನೆಯಾಗಿದ್ದು ಸಮಾಜದ ಎಲ್ಲಾ ವರ್ಗದ ಜನರು ಇದರ ಸದುಪಯೋಗ ಪಡೆಯಬಹುದೆಂದು ತಿಳಿಸಿದರು.

ಈ ಯೋಜನೆ ಕುರಿತಾದ ಯಾವುದೇ ಮಾಹಿತಿ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇರುವವರು ನಗರದ ಎ.ಎ ವೃತ್ತ ಸಮೀಪದ ಸ್ಮಾರ್ಟ್ ಸಿಟಿ ಕಚೇರಿಯ ಮೇಲ್ಭಾಗದಲ್ಲಿ ಇರುವ ಇಲಾಖೆಯ ಕಚೇರಿಗೆ ಆಗಮಿಸಿಬಹುದೆಂದು ಸಹ ತಿಳಿದರು.

Rotary Club Shivamogga ಈ ಸಂದರ್ಭದಲ್ಲಿ ಉಪನಿರ್ದೇಶಕ ಸುರೇಶ್ ಅವರನ್ನು ಸನ್ಮಾನಿಸಿ ಮಾತನಾಡಿದ ಕ್ಲಬ್ ಅಧ್ಯಕ್ಷ ರೊ.ಮುಸ್ತಾಕ್, ತಾವೂ ಸಹ ಕೈಗಾರಿಕೋದ್ಯಮಿಯಾಗಿದ್ದು, ಸರ್ಕಾರದ ಹಲವಾರು ಯೋಜನೆಗಳು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳ ಪ್ರೋತ್ಸಾಹಕ್ಕೆಂದೇ ಜಾರಿಯಲ್ಲಿದ್ದು, ಆನ್ ಲೈನ್ ನಲ್ಲಿ ಈ ಯೋಜನೆಗಳ ಬಹುತೇಕ ಪ್ರಕ್ರಿಯೆಗಳು ನಡೆಯುವುದರಿಂದ ಸೇವೆಗಳು ಪಾರದರ್ಶಕವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಜನರಿಗೆ ಲಭಿಸುತ್ತಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಲಬ್ ಕಾರ್ಯದರ್ಶಿ ರೊ.ಶ್ರೀಕಾಂತ್.ಎ.ವಿ, ಜೋನಲ್ ಲೆಫ್ಟಿನೆಂಟ್ ರೊ. ಮಂಜುಳಾ ರಾಜು, ಕ್ಲಬ್ ಕಲಿಕಾ ಮಾರ್ಗದರ್ಶಿ ರೊ. ಹೆಚ್.ಎಲ್.ರವಿ, ಮಾಜಿ ಅಧ್ಯಕ್ಷ ರೊ. ರಾಜು.ಸಿ ಹಾಗೂ ಕ್ಲಬ್ ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...