Monday, August 24, 2026
Monday, August 24, 2026

Forest Department ಕೆಳದಿಯ ಮರಸ ಗ್ರಾಮದಲ್ಲಿನ ಸರ್ಕಾರಿ ಭೂಮಿಯಲ್ಲಿಟ್ಟಿದ್ದ ಬೀಟೆ ಮರದ ದಿಮ್ಮಿಗಳನ್ನ ವಶಪಡಿಸಿಕೊಂಡ ಅರಣ್ಯ ಇಲಾಖೆ

Date:

Forest Department ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರದ ತುಂಡುಗಳನ್ನು ಸಾಗರ ವಿಭಾಗದ ಅರಣ್ಯಾಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ. ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಸೂಚನೆಯ ಮೇರೆಗೆ, ಕೆಳದಿಯ ಮರಸ ಗ್ರಾಮದ ಸರ್ಕಾರಿ ಜಾಗದಲ್ಲಿದ್ದ ಬೀಟೆ ದಿಮ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ.
Forest Department ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಬಿ. ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ. 1.569 ಘನ ಮೀಟರ್ ಅಕ್ರಮ ಬೀಟೆ ಜಪ್ತಿ ಮಾಡಲಾಗಿದೆ. ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಸಂಬಂಧ ಪ್ರಕರಣ ದಾಖಲಾಗಿದೆ. ದಾಸ್ತಾನು ಮಾಡಿದ್ದು ಯಾರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕೆಳದಿ ಉಪವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಜೆ, ಸಾಗರ ಶಾಖೆಯ ಅಶೋಕ ಅಯ್ಯನಹಳ್ಳಿ, ಗಸ್ತು ಅರಣ್ಯ ಪಾಲಕ ಯುವರಾಜ ಕೆ.ಆರ್., ಮಹೇಶ್ ಜಕ್ಕಳ್ಳಿ, ಶಿವನಗೌಡ ದಾಳಿಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...