Sunday, August 2, 2026
Sunday, August 2, 2026

Department-of-disabled-and-senior-citizens ಸೆ,5 ರಂದು ಹಿರಿಯ ನಾಗರೀಕರಿಗೆ ಕ್ರೀಡೆ & ಸಾಂಸ್ಕೃತಿಕ ಸ್ಪರ್ಧೆಗಳ ವ್ಯವಸ್ಥೆ

Date:

Department-of-disabled-and-senior-citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 01 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 05 ರ ಗುರುವಾರದಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಪುರುಷರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್, 60-69 ವರ್ಷದವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು. 70 ವರ್ಷದವರಿಗೆ ಹಾಗೂ ಮೇಲ್ಪಟ್ಟವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.

ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್. 60-69 ವರ್ಷದವರಿಗೆ ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.70 ವರ್ಷ ಹಾಗೂ ಮೇಲ್ಪಟ್ಟವರಿಗೆ- ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.
ಪುರುಷರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಮಹಿಳೆಯರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ,

Department-of-disabled-and-senior-citizens 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಆಸಕ್ತ ಹಿರಿಯ ನಾಗರಿಕರು 60 ವರ್ಷ ಮೇಲ್ಪಟ್ಟವರಾಗಿರಬೇಕು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿಯೊಂದಿಗೆ ದಿನಾಂಕ:04-09-2024ರ ಒಳಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಡಿ.ವೈ.ಎಸ್.ಪಿ ಕಛೇರಿ ಆವರಣ ಶಿವಮೊಗ್ಗ ಇಲ್ಲಿ ನೊಂದಣಿ ಮಾಡಿಸಿಕೊಳ್ಳತಕ್ಕದ್ದು.

ನೊಂದಣಿಗಾಗಿ ದೂ,ಸಂ : ರವೀಂದ್ರ-9164444370, ಯುವರಾಜ- 9632570371 ಮತ್ತು ಕಚೇರಿ ದೂ,ಸಂ -08182-221188/260424 ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...