Sunday, December 7, 2025
Sunday, December 7, 2025

Natanam Bala Natya Kendra ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50 ಕ್ಕೂ ಹೆಚ್ಚು ಕಲಾವಿದರಿಂದ ಬ್ಯಾಂಕಾಕ್ ಪ್ರವಾಸ

Date:

Natanam Bala Natya Kendra ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು ಥೈಲೆಂಡ್ ಹಾಗೂ ಬ್ಯಾಂಕಾಕ್ ಪ್ರವಾಸವನ್ನು ಕೈಗೊಂಡಿದೆ.
ನಿರಂತರವಾಗಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಿರಾರು ಸಾಧನೆ ಮಾಡಿರುವ ನಟನಂ ಬಾಲ ನಾಟ್ಯ ಕೇಂದ್ರದ ಐವತ್ತಕ್ಕೂ ಹೆಚ್ಚು ಕಲಾವಿದರ ತಂಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದರೊಂದಿಗೆ ಕೇಂದ್ರದ ಸಂಸ್ಥಾಪಕರು, ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಕೇಶವಕುಮಾರ್ ಅವರಿಗೆ ಪಂದ್ಯಾವಳಿ ಸಮಾರಂಭದಲ್ಲಿ ವಿಶೇಷ ಗೌರವ ನೀಡಿ ಸನ್ಮಾನಿಸಲಿದ್ದಾರೆ.
Natanam Bala Natya Kendra ಸೆ.6 ರಿಂದ ನಡೆಯಲಿರುವ ಪಂದ್ಯಾವಳಿಯಲ್ಲಿ ನಟನಂ ಕೇಂದ್ರದ ಕಲಾವಿದರಾದ ದೃತಿ, ಅನಿಂದಿತ, ಸಾನ್ವಿ ಎಸ್., ಸಂಜನಾ, ನೈದಿಲೆ, ವೈಷ್ಣವಿ, ಪೂಜಾ, ಸೌಮ್ಯ, ಸಾನಿಕ, ಸುಷ್ಮಿತ, ಅಮೂಲ್ಯ, ಪೂರ್ವಿಕ, ಸುದೀಕ್ಷ, ಭೂಮಿಕ, ಮನಸ್ವಿ, ಸಾನ್ವಿ ಜಿ., ಸಿಂಚನ, ಖುಷಿ, ತೇಜಸ್ವಿನಿ, ಮಾನಸ, ಕಶ್ವಿ, ಶ್ರೀ ಗೌರಿ, ಅನುಷಾ, ಸಾಧ್ವಿ, ಮೇಘನಾ, ಸೌರವಿ, ಷಣ್ಮುಕಿ, ದೀಕ್ಷಾ, ಅನನ್ಯ, ಸುಜನ, ಸ್ಪೂರ್ತಿ, ರಮ್ಯಶ್ರೀ, ರೋಹಿತ, ಪ್ರೇರಣ, ದೇವಿ ಚಿನ್ಮಯಿ, ಭೂಮಿಕಾ, ಲಿಪಿಕ, ಶಾಂತಿಪ್ರಿಯ, ಮೌಲ್ಯ, ಉಪಾಸನ, ಗೆಹೇನ, ಆಕಾಂಕ್ಷ, ಶಾಲಿನಿ, ಸೀಮಾ, ಪ್ರಜ್ಞಾ ಅವರೊಂದಿಗೆ ಶಿಕ್ಷಕರ ತಂಡವಾದ ಸುಪ್ರಿಯ, ಚೈತ್ರ, ನಾಟ್ಯಶ್ರೀ, ಸೌಮ್ಯ, ವಂದನ ಕೆ. ಚೇತನ್, ಚಂದ್ರಪ್ಪ, ಶೇಖರ್ ಅವರು ಈ ಪಂದ್ಯಾವಳಿಗೆ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...