Friday, June 26, 2026
Friday, June 26, 2026

Rotary Club Shimoga ಗುಡ್ ಟಚ್,ಬ್ಯಾಡ್ ಟಚ್. ಹೆಣ್ಣುಮಕ್ಕಳಿಗೆ ಜಾಗೃತಿ ಕಾರ್ಯಕ್ರಮ

Date:

Rotary Club Shimoga ಶಿವಮೊಗ್ಗ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಆನ್ಸ್ ಕ್ಲಬ್ ನಿಂದ ಅನನ್ಯ ಸ್ಕೂಲಿನಲ್ಲಿ ಹೆಣ್ಣು ಮಕ್ಕಳಿಗೆ ಪ್ರೌಢ ಹಂತದಲ್ಲಿ ಆಗುವ ದೈಹಿಕ ಬದಲಾವಣೆ ಮತ್ತು ಗುಡ್ ಟಚ್ ಬ್ಯಾಡ್ ಟಚ್ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಸೆಂಟ್ರಲ್ ನ ಅಧ್ಯಕ್ಷ ಕಿರಣ್ ಕುಮಾರ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ
ನಾರಾಯಣ ಹೃದಯಾಲಯ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ರಶ್ಮಿ ಅಂಚಿನಾಳು ಮಕ್ಕಳ ಪ್ರೌಢ ಹಂತದಲ್ಲಾಗುವ ಹಾರ್ಮೋನ್ ಗಳ ಉತ್ಪತ್ತಿ, ಧ್ವನಿ ಬದಲಾವಣೆ, ಬ್ರೆಸ್ಟ್ ಡೆವಲಪ್ಮೆಂಟ್, ಗರ್ಭಕೋಶದ ಸಣ್ಣ ಪರಿಚಯ, ಋತುಮತಿ ಆಗುವುದು ಅಂದರೆ ಏನು ಮತ್ತು ಮಾನಸಿಕವಾಗಿ ಆಗುವ ಆತಂಕ ಹಿಂಜರಿಕೆ ಬಗ್ಗೆ ಹಾಗೂ ಆಹಾರ, ನಿದ್ರೆ, ಕ್ರೀಡೆ, ವ್ಯಾಯಾಮ, ಸ್ವಚ್ಛತೆ ಮುಂತಾದ ವಿಷಯಗಳ ಕುರಿತು ತುಂಬಾ ಉಪಯುಕ್ತ ಮಾಹಿತಿಗಳನ್ನು ಚಿಕ್ಕ ಮಕ್ಕಳಿಗೆ ತಿಳಿಸಿ, ಹಾಗೆಯೇ ಋತುಮತಿಯಾದ ನಂತರದಲ್ಲಿ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಮಕ್ಕಳಿಗೆ ಕಿವಿಮಾತು ಹೇಳಿದರು.

Rotary Club Shimoga ಆನ್ಸ್ ಅಧ್ಯಕ್ಷರಾದ ಗೀತಾ ಜಗದೀಶ್ ಮಾತನಾಡಿ, ಹೆಣ್ಣು ಮಕ್ಕಳು ಋತುಮತಿಯಾಗುವುದು ಸಹಜವಾದ ಕ್ರಿಯೆ. ಇದು ಪ್ರತಿಯೊಂದು ಹೆಣ್ಣು ಮಕ್ಕಳಲ್ಲಿಯೂ ಆಗುವ ದೈಹಿಕ ಕ್ರಿಯೆ. ಇದಕ್ಕೆ ಆತಂಕ ಹಿಂಜರಿಕೆ ಪಡಬಾರದು. ಋತುಮತಿಯಾಗುವ ಮೊದಲು ನೀವು ಎಲ್ಲಾ ಕೆಲಸಗಳಲ್ಲಿಯೂ ಹೇಗೆ ಚಟುವಟಿಕೆಯಿಂದ ಇರುತ್ತಿದ್ದಿರೋ ಅದೇ ರೀತಿ, ನಂತರವೂ ಆಟ ವಿದ್ಯಾಭ್ಯಾಸ ಮನೆ ಕೆಲಸ ಎಲ್ಲದರಲ್ಲಿಯೂ ಚಟುವಟಿಕೆಯಿಂದಿರಬೇಕು. ಇಂದು ನಿಮಗೆ ತಿಳಿದಿರುವ ಸ್ವಲ್ಪ ವಿಷಯವಾದರೂ ನಿಮ್ಮ ಸ್ನೇಹಿತೆಯರಿಗೂ ತಿಳಿಸಿ ಎಂದು ಮಕ್ಕಳನ್ನು ಕುರಿತು ಹೇಳಿದರು.

ಅನನ್ಯ ಶಾಲೆಯ ಮಕ್ಕಳು ಈ ಕಾರ್ಯಗಾರದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಅನನ್ಯ ಶಾಲೆಯ ಫೌಂಡರ್ ಮತ್ತು ಪ್ರಾಂಶುಪಾಲರಾದ ಗಿರೀಶ್ ಹಾಗೂ ಅನನ್ಯ ಶಾಲೆಯ ಶಿಕ್ಷಕರು, ಪಾಸ್ ಅಸಿಸ್ಟೆಂಟ್ ಗವರ್ನರ್ ರವಿ ಕೋಟೊಜಿ , ಧರ್ಮೇಂದ್ರ ಸಿಂಗ್, ಕೆ.ವಿ.ಗಣೇಶ್ ಹಾಗೂ ಜ್ಯೋತಿ ಶ್ರೀ ರಾಮ್, ನಯನ ಗಣೇಶ್ ಉಪಸಿತರಿದ್ದರು. ರಾಜಶ್ರೀ ಬಸವರಾಜ್ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...