Sunday, March 22, 2026
Sunday, March 22, 2026

Bhadravathi Ganesha Festival 2024 ಅರಬಿಳಚಿಯಲ್ಲಿ ಗಣೇಶೋತ್ಸವ ವಾದ್ಯಮೇಳ ವಿವಾದ,ಗಲಭೆ. ಆರು ಮಂದಿ ಗಾಯಾಳು

Date:

Bhadravathi Ganesha Festival 2024 ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದು ಪೊಲೀಸರೇ ವಿಸರ್ಜನೆ ನಡೆಸಿದ ಘಟನೆ ಅರೆಬಿಳಚಿ ಕ್ಯಾಂಪಿನಲ್ಲಿ ನಡೆದಿದೆ.
ಈ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಗೂ ಸಣ್ಣಪುಟ್ಟ ಗಾಯವಾಗಿದೆ.,
ಗಲಾಟೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಮಧ್ಯಪ್ರವೇಶಿಸಿ ಗಣಪತಿಯನ್ನ ವಿಸರ್ಜನೆ ಮಾಡಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅರಬಿಳಚಿ ಕ್ಯಾಂಪ್‌ನಲ್ಲಿ ತಮಿಳರ ಮತ್ತು ಬೋವಿ ಕಾಲನಿಯ ಗಣಪತಿಯನ್ನು ಪ್ರತ್ಯೇಕ ಕೂಡ್ರಿಸಲಾಗಿದ್ದು, ವಿಸರ್ಜನೆಗೆ ಒಂದೇ ಡೊಳ್ಳಿನ ತಂಡದವರಿಗೆ ಆಮಂತ್ರಿಸಲಾಗಿತ್ತು.

Bhadravathi Ganesha Festival 2024 ತಂಡದವರು ಬಂದಾಗ ತಮ್ಮ ಗಣಪತಿ ವಿಸರ್ಜನೆಗೆ ಬರಬೇಕೆಂದು ಇತ್ತಂಡದವರೂ ಹಠ ಹಿಡಿದಾಗ ಗಲಾಟೆ ನಡೆದಿದೆ‌ .
ಡೊಳ್ಳು ಬಾರಿಸುವವರ ಜೊತೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಪೊಲೀಸ್ ಸೇರಿದಂತೆ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳು ಭದ್ರಾವತಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...