Wednesday, August 12, 2026
Wednesday, August 12, 2026

Horticulture Department ಪಿಎಂ ಕೃಷಿ ಸಿಂಚಾಯಿ ಯೋಜನೆ ಲಾಭ ಪಡೆಯಲು ಶಿಕಾರಿಪುರ ತಾಲ್ಲೂಕಿನ ಅರ್ಹರಿಂದ ಅರ್ಜಿ ಆಹ್ವಾನ

Date:

Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಿದೆ.
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಮೊದಲ 2 ಹೆ. ಪ್ರದೇಶದವರೆಗೆ ಶೇ. 90% ಮತ್ತು 3 ಹೆ. ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ಇಲಾಖೆಯಿಂದ ಅನುಮೋದಿತ ಕಂಪನಿಗಳ ಮೂಲಕವೇ ರೈತರು ಸೂಕ್ಷ್ಮ ನೀರಾವರಿ ಘಟಕವನ್ನು ಅಳವಡಿಸಿಕೊಲ್ಳುವುದು. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯುವುದು.
Horticulture Department 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಪರಿಶಿಷ್ಟ ಜಾತಿ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವುದು. ಹಾಗೂ 2024-25ನೇ ಸಾಲಿನ ಎಸ್.ಎಂ.ಎ.ಎಂ. ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೂ ಅಡಿಕೆ ದೋಟಿಗಳಿಗೆ ಸಹಾಯಧನ ನೀಡುಲಾಗುವುದು. ಆಸಕ್ತ ರೈತರು ಆಯಾ ಹೋಬಳಿ ರೈತರ ಸಂಪರ್ಕ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವುದು.
ಈ ಎಲ್ಲಾ ಯೋಜನೆಗಳಿಗೆ ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...