Tuesday, May 26, 2026
Tuesday, May 26, 2026

Kalaburagi Police ಹನಿಟ್ರ್ಯಾಪ್ ಸಂಬಂಧ 8/ಯುವಕರ ವಿರುದ್ಧ ಪ್ರಕರಣ ದಾಖಲು

Date:

Kalaburagi Police ಅಸಹಾಯಕ ಮಹಿಳೆಯರನ್ನ ಬಳಸಿಕೊಂಡು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ.

ಬಳಿಕ, ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ.
ನ್ಯಾಯಕ್ಕಾಗಿ ಅಲೆದಾಡುವ ಒಂಟಿ ಮಹಿಳೆಯರೇ ಇವರಿಗೆ ಟಾರ್ಗೆಟ್ . ಈ ಜಾಲದ ಬಗ್ಗೆ ಸ್ವತಃ ಹನಿಟ್ರ್ಯಾಪ್ಗೆ ಒಳಗಾದ ಮಹಿಳೆಯರೇ ದೂರು ನೀಡಿದ್ದು, ಇತ್ತ ಹನಿಟ್ರ್ಯಾಪ್ ಮಾಡುವ ಮಹಿಳೆಯರಿಗೆ, ಅತ್ತ ಅವರ ಬಲೆಗೆ ಬೀಳುವ ಉದಗಯಮಿ, ಅಧಿಕಾರಿಗಳು, ಶ್ರೀಮಂತರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.

ಮಹಾರಾಷ್ಟ್ರ ಮೂಲದ ಯುವತಿಯೋರ್ವಳನ್ನು ಬಳಸಿಕೊಂಡು ಉದ್ಯಮಿ ವಿನೋಧ ಎನ್ನುವಾತನಿಗೆ ಹನಿಟ್ರ್ಯಾಪ್ ಮಾಡಿದ್ದು, ಯುವತಿಯ ಮೂಲಕ ವಿನೋಧಗೆ ಖೆಡ್ಡಾ ತೋಡಿ ಕಲಬುರಗಿಯ ಲಾಡ್ಜಗೆ ಕರೆಸಿ ಹಲವು ವಿಡಿಯೋ ಮಾಡಿಸಿಕೊಂಡು ನಂತರ ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡಿದೆ ಎಂದು ಆರೋಪಿಸಲಾಗಿದೆ.

ಹನಿಟ್ರ್ಯಾಪ್ಗೆ ಬಳಸುತ್ತಿದ್ದ ಯುವತಿಯನ್ನು ಕೆಲಸ ಕೊಡಿಸುವುದಾಗಿ ಕಲಬುರಗಿಗೆ ಕರೆಸಿ ಲಾಡ್ಜ್ನಲ್ಲಿಟ್ಟು ಇತರರಿಂದ ಅತ್ಯಾಚಾರಕ್ಕೆ ಗುರಿಯಾಗಿಸಿದ್ದು, ನಂತರ ಆ ವಿಡಿಯೋಗಳನ್ನು ಮಾಡಿಕೊಂಡು ನಾವು ಹೇಳಿದಂತೆ ಕೇಳು ಇಲ್ಲದಿದ್ರೆ ವಿಡಿಯೋ ಹೊರಗೆ ಹಾಕ್ತಿವಿ ಅಂತ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಇದೇ ರೀತಿ ಗಂಡನಿಂದ ನ್ಯಾಯ ಕೇಳಲು ಬಂದ ಕಮಲಾಪೂರ ತಾಲೂಕಿನ ಡೋಂಗರಗಾಂವ್ ಮಹಿಳೆಯನ್ನೂ ಈ ಖತರ್ನಾಕ್ ಗ್ಯಾಂಗ್ ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದು, ಪೊಲೀಸ್ ಕಾನ್ಸಟೇಬಲ್ಗೆ ಕರೆ ಮಾಡಿಸಿ ಪುಸಲಾಯಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿ ವಿಡಿಯೋ ಮಾಡಿಕೊಂಡಿದ್ದಾರೆ.

Kalaburagi Police ನಂತರ ಪೇದೆ ಬಸವರಾಜ್ಗೆ ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು ಡೋಂಗರಗಾಂವ್ ಮಹಿಳೆ ಆರೋಪಿಸಿದ್ದಾರೆ.
ದೂರು ನೀಡಿರುವ ಮಹಿಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ದಲಿತ ಸೇನೆ ಸಂಘಟನೆ ಕಟ್ಟಿಕೊಂಡು ಇದನ್ನೇ ಮಾಡುತ್ತಿದ್ದಾರೆ. ನಮ್ಮಂತ ಹತ್ತಾರು ಅಮಾಯಕ ಮಹಿಳೆರನ್ನು ಈ ರೀತಿ ಹನಿಟ್ರ್ಯಾಪ್ ಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸ್ವತಃ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.

ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...