Friday, March 20, 2026
Friday, March 20, 2026

Children’s Day ಹೊಯ್ಸಳ & ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನ

Date:

Children’s Day ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು.
ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

Children’s Day ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ(ಇಂಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಮಕ್ಕಳ ದಿನಾಚರಣೆ -2024 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು ದಿ: 24-09-2024 ರೊಳಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...