Sunday, December 7, 2025
Sunday, December 7, 2025

Actor Darshan ನಟ ದರ್ಶನ್ ವಿರುದ್ದ ಮತ್ತೆ ಮೂವರು ಸಾಕ್ಷಿ ಹೇಳಲು ಸಿದ್ಧ

Date:

Actor Darshan ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ವಿವರ.
ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರು ಜೈಲು ಸೇರಿ ಮೂರು ತಿಂಗಳು ಕಳೆಯುತ್ತಾ ಬಂದಿದ್ದು, ಅವರ ವಿರುದ್ಧ ಚಾರ್ಜ್​​ಶೀಟ್ ಕೂಡ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಬರೋಬ್ಬರಿ 3991 ಪುಟಗಳ ಚಾರ್ಜ್​ಶೀಟ್ ನ್ಯಾಯಾಲಯದ ಕೈ ಸೇರಿದೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ವಿವರ.
Actor Darshan ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಕೋರ್ಟ್​ನಲ್ಲಿ ಮಹತ್ವ ಪಡೆದುಕೊಳ್ಳುತ್ತವೆ. ಈಗ ದರ್ಶನ್ ವಿರುದ್ಧ 3 ಜನರು ಸಾಕ್ಷಿ ಹೇಳಲು ರೆಡಿ ಆಗಿದ್ದಾರೆ. ಅದರಲ್ಲಿ ಸಾಕ್ಷಿ ನಂಬರ್​ 1 ಶೆಡ್ಡಿನ ವಾಚ್​ಮ್ಯಾನ್. ದರ್ಶನ್ ಶೆಡ್​ಗೆ ಬಂದಿದ್ದು, ಹೋಗಿದ್ದು ಸೇರಿ ಎಲ್ಲಾ ಮಾಹಿತಿ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ. ಘಟನೆ ನಡೆದ ಸಮಯದಲ್ಲಿ ಯಾರು ಬಂದರು, ಯಾವಾಗ ಬಂದರು, ಯಾವ ವಾಹನಗಳು ಬಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ರೇಣುಕಾ ಸ್ವಾಮಿ ಬದುಕಿದ್ದಾಗ ವಾಚ್​ ಮ್ಯಾನ್ ನೋಡಿದ್ದರು ಎನ್ನಲಾಗಿದೆ.
ಶೆಡ್​​ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಎರಡು ಹಾಗೂ ಮೂರನೇ ಪ್ರತ್ಯಕ್ಷ ಸಾಕ್ಷಿ ಎಂದು ಪರಿಗಣಿಸಲಾಗಿದೆ. ರೇಣುಕಾ ಸ್ವಾಮಿಗೆ ಎಷ್ಟು ಸಮಯ ಹೊಡೆದರು, ಯಾರು ಏನು ಮಾಡಿದರು ಎಂಬ ಸಂಪೂರ್ಣ ಮಾಹಿತಿಯನ್ನು ಸಾಕ್ಷಿದಾರರು ನೀಡಿದ್ದಾರೆ. ಇವುಗಳು ದರ್ಶನ್​ಗೆ ಮುಳುವಾಗುವ ಸಾಧ್ಯತೆ ಇದೆ.
ದರ್ಶನ್ ಸೇರಿ ಬಂಧನಕ್ಕೆ ಒಳಗಾದ 17 ಮಂದಿಯಲ್ಲಿ ಯಾರು ಕೊಲೆ ಮಾಡಿದ್ದು ಎಂಬುದು ಇನ್ನೂ ಸಾಬೀತಾಗಿಲ್ಲ. ಸದ್ಯ ಎಲ್ಲರ ಭಾಗಿದಾರತ್ವ ಇರುವ ಬಗ್ಗೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಈ ಪೈಕಿ ಯಾರು ತಪ್ಪು ಮಾಡಿದ್ದಾರೆ, ಯಾರ ಪಾತ್ರ ಎಷ್ಟಿದೆ ಎನ್ನುವ ವಿಚಾರ ಕೋರ್ಟ್ ವಿಚಾರಣೆ ಬಳಿಕ ಗೊತ್ತಾಗಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...